ಮೈಸೂರು: ಯುವಕನೋರ್ವನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧದ ಕ್ರಮಕ್ಕೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಭಾನುವಾರ (ಜೂನ್. 23) ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಈ ಪ್ರಕರಣದ ಸಂಬಂಧ ನನಗೆ ಯಾವುದೇ ಮಾಹಿತಿಯಿಲ್ಲ. ಸೂರಜ್ ಬಂಧನದ ವಿಚಾರವೂ ನನಗೆ ಮಾಧ್ಯಮದಿಂದಲೇ ತಿಳಿಯಿತು. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆಯಾಗಲಿದೆ. ಪಕ್ಷ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅವರು ತಿಳಿಸಿದರು.
ನನ್ನ ಮಗನಾಗಲಿ, ನನ್ನ ಸಂಬಂಧಿಗಳೇ ಇರಲಿ, ಪಕ್ಷದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ಪರವಾಗಿ ಎಂದೂ ನಿಲ್ಲುವುದಿಲ್ಲ. ನಾನು ತಪ್ಪು ಮಾಡಿದವರ ಪರ ಎಂದೂ ನಿಲ್ಲುವುದಿಲ್ಲ ಎಂದರು.
ಸೂರಜ್ ರೇವಣ್ಣ ಬಂಧನದಿಂದ ಪಕ್ಷಕ್ಕೆ ಮುಜುಗರ ತಂದಿದೆಯಾ ಎಂಬ ಪ್ರಶ್ನೆಗೆ, ರಾಜ್ಯದಲ್ಲಿ ಯಾರೋ ಒಬ್ಬರು ತಪ್ಪು ಮಾಡಿದರೇ ಅದಕ್ಕೆ ಆರೂವರೆ ಕೋಟಿ ಜನರು ಕಾರಣವೇ? ಇಲ್ಲಾ ತಾನೆ? ಎಂದು ಪ್ರತಿಕ್ರಿಸಿದರು.
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…
ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…