ಮೈಸೂರು: ಯುವಕನೋರ್ವನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧದ ಕ್ರಮಕ್ಕೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಭಾನುವಾರ (ಜೂನ್. 23) ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಈ ಪ್ರಕರಣದ ಸಂಬಂಧ ನನಗೆ ಯಾವುದೇ ಮಾಹಿತಿಯಿಲ್ಲ. ಸೂರಜ್ ಬಂಧನದ ವಿಚಾರವೂ ನನಗೆ ಮಾಧ್ಯಮದಿಂದಲೇ ತಿಳಿಯಿತು. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆಯಾಗಲಿದೆ. ಪಕ್ಷ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅವರು ತಿಳಿಸಿದರು.
ನನ್ನ ಮಗನಾಗಲಿ, ನನ್ನ ಸಂಬಂಧಿಗಳೇ ಇರಲಿ, ಪಕ್ಷದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ಪರವಾಗಿ ಎಂದೂ ನಿಲ್ಲುವುದಿಲ್ಲ. ನಾನು ತಪ್ಪು ಮಾಡಿದವರ ಪರ ಎಂದೂ ನಿಲ್ಲುವುದಿಲ್ಲ ಎಂದರು.
ಸೂರಜ್ ರೇವಣ್ಣ ಬಂಧನದಿಂದ ಪಕ್ಷಕ್ಕೆ ಮುಜುಗರ ತಂದಿದೆಯಾ ಎಂಬ ಪ್ರಶ್ನೆಗೆ, ರಾಜ್ಯದಲ್ಲಿ ಯಾರೋ ಒಬ್ಬರು ತಪ್ಪು ಮಾಡಿದರೇ ಅದಕ್ಕೆ ಆರೂವರೆ ಕೋಟಿ ಜನರು ಕಾರಣವೇ? ಇಲ್ಲಾ ತಾನೆ? ಎಂದು ಪ್ರತಿಕ್ರಿಸಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…