ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದರು. ಆದರೆ ಸಿಎಂ ಸಿದ್ದು ಪರ ಶಾಸಕ ಜಿ.ಟಿ.ದೇವೇಗೌಡ ಅವರು ಹೇಳಿಕೆ ನೀಡಿ ಜೆಡಿಎಸ್ ನಾಯಕರ ಅಸಮಾಧಾನಕ್ಕೆ ಗುರಿಯಾಗಿದ್ದರು. ಹೀಗಾಗಿ ಜಿಟಿಡಿ ವಿರುದ್ಧ ಸ್ವಪಕೀಯ ನಾಯಕರೇ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯ ರಾಜೀನಾಮೆಗೆ ಹೋರಾಟ ನಡೆಸುತ್ತಿದ್ದಾರೆ, ಆದರೆ, ಈ ಮಧ್ಯೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾದರೆ ರಾಜೀನಾಮೆ ನೀಡಬೇಕಾ? ಹಾಗಾಂತ ಕಾನೂನು ಇದೆಯಾ? ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ಕೇಳಿದರೆ ಕೊಡುತ್ತಾರಾ? ಎಂದು ಪ್ರಶ್ನೆ ಮಾಡಿದ್ದರು.
ಜಿ.ಟಿ.ದೇವೇಗೌಡರ ಈ ಹೇಳಿಕೆಯಿಂದ ಎನ್ಡಿಎ ನಾಯಕರು ಮುಜುಗರಕ್ಕೆ ಒಳಗಾಗಿದ್ದು, ಈ ಹೇಳಿಕೆಯಿಂದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಮುನಿಸಿಕೊಂಡಿದ್ದಾರೆ. ಅಲ್ಲದೇ ಜಿಟಿಡಿ ಅವರ ಬಗ್ಗೆ ಎಚ್.ಡಿ.ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದು ಅವರ ಆಪ್ತರ ಮೂಲಗಳಿಂದ ತಿಳಿದು ಬಂದಿದೆ.
ಈ ಮಧ್ಯೆ ಜಿ.ಟಿ.ದೇವೇಗೌಡರ ಹೇಳಿಕೆಯಿಂದ ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆಗಿದ್ದು, ಮುಡಾ ಹೋರಾಟಕ್ಕೆ ಎನ್ಡಿಎ ಮೈತ್ರಿ ಒಕ್ಕೂಟಕ್ಕೆ ಹಿನ್ನಡೆಯಾಗಿದೆ. ಈ ಕಾರಣಕ್ಕೆ ಜಿ.ಟಿ.ದೇವೇಗೌಡ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ನ ಹಾಲಿ ಮತ್ತು ಮಾಜಿ ಶಾಸಕರು ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಮನವಿ ಮಾಡಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…