ಮೈಸೂರು

ಉತ್ತಮ ಆಡಳಿತಕ್ಕೆ ಗ್ಯಾರಂಟಿ ಯೋಜನೆ ಮಾದರಿಯಾಗಿದೆ : ಡಾ. ಪುಷ್ಪ ಅಮರನಾಥ್

ನಂಜನಗೂಡು : ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಚುನಾವಣೆಯಲ್ಲಿ ಸ್ಪಷ್ಟ ಬಹುಮತದ ಬಳಿಕ ರಾಜ್ಯದ ಜನರಿಗೆ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದ್ದೇವೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷೆ ಡಾ, ಪುಷ್ಪ ಅಮರನಾಥ್ ಹೇಳಿದರು.

ಹುಣ್ಣಿಮೆ ಹಿನ್ನೆಲೆಯಲ್ಲಿ ಮಂಗಳವಾರ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೇವಾಲಯಕ್ಕೆ ಕುಟುಂಬ ಸಮೇತ ಆಗಮಿಸಿ, ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದು ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ ಗ್ರಹಗಳಿಗೆ ಪ್ರದಕ್ಷಿಣೆ ಹಾಕಿ ದರ್ಶನ ಪಡೆದರು.

ಬಳಿಕ ಮಾತನಾಡಿದ ಅವರು, ಮುಂದಿನ ರಾಜಕೀಯ ಬಗ್ಗೆ ನಾನು ಯೋಚನೆ ಮಾಡಿಲ್ಲ. ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರನ್ನಾಗಿ ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನಂಜುಂಡೇಶ್ವರ ಸ್ವಾಮಿ ನಮ್ಮ ಮನೆದೇವರಾಗಿದ್ದು, ಸನ್ನಿಧಿಗೆ ಬಂದಿದ್ದೇನೆ. ಆದರೆ, ದೇವಾಲಯದ ಸನ್ನಿಧಿಯಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ. ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ನೀಡಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ, ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಇಂದು ದೇವಸ್ಥಾನದಲ್ಲಿ ನೋಡಿದಾಗ ಹೆಚ್ಚಿನ ಸಂಖ್ಯೆಯಲ್ಲಿ ಉಚಿತವಾಗಿ ಮಹಿಳೆಯರು ಆಗಮಿಸಿ , ದೇವರ ದರ್ಶನವನ್ನ ಪಡೆಯುತ್ತಿರುವುದು ಸಂತಸದ ವಿಷಯವಾಗಿದೆ. ಗ್ಯಾರಂಟಿ ಯೋಜನೆಗಳು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರ ಖಾತೆಗೆ ಹಣ ಬಂದರೆ ಕುಟುಂಬದ ನಿರ್ವಹಣೆಗೆ ಒತ್ತಡ ಕಡಿಮೆಯಾಗುತ್ತದೆ. ಮಹಿಳೆಯರು ಸ್ವಾವಲಂಬಿಯಾಗಿ ನಿಲ್ಲಲು ಸಹಕಾರಿಯಾಗಿದೆ ಎಂದರು.

ಇದನ್ನು ಓದಿ : ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್‌ಕುಮಾರ್‌ ; ಕಾರಣವೇನು?

ಸಿ.ಎಂ ಸಿದ್ದರಾಮಯ್ಯರವರ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಟ್ಟಿದ್ದೇವೆ ಇದರಿಂದ ಬಡ ಜನರಿಗೆ ಅನುಕೂಲವಾಗಿದೆ. ತಲಾ ಆದಾಯದಲ್ಲೂ ನಮ್ಮ ರಾಜ್ಯವು ಒಂದನೇ ಸ್ಥಾನದಲ್ಲಿದೆ. ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಬೇಕು. ನಾವು ಜಾತಿ ಸಮೀಕ್ಷೆಯಿಂದ ಜಾತಿಗಳನ್ನು ಹೊಡೆಯುತ್ತಿಲ್ಲ ನಾವು ಸಮಾನತೆಯನ್ನು ತರಲು ಹೊರಟಿದ್ದೇವೆ. ಕೇಂದ್ರವು ಕೂಡ ಜಾತಿಗಣತಿ ನಡೆಸಲು ಮುಂದಾಗಿದೆ.‌ ಬಿಜೆಪಿಯವರಿಗೆ ಕೆಲಸವೇನು ಇಲ್ಲ ಟೀಕೆ ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ ಟೀಕಿಸಿದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವುದು ಖಂಡನೀಯ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ನ್ಯಾಯಾಂಗ ವ್ಯವಸ್ಥೆ ಕೂಡಲೇ ವಕೀಲನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂಬರುವ ದಿನಗಳಲ್ಲಿ ಮಹಿಳಾ ಮೀಸಲು ಕ್ಷೇತ್ರವಾದರೆ ಚುನಾವಣೆಗೆ ಸ್ಪರ್ಧೆ ಮಾಡುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಯೋಗ ಮತ್ತು ಯೋಗ್ಯತೆ ಇರಬೇಕು. ಈ ಬಗ್ಗೆ ನಾನು ಯೋಚನೆ ಮಾಡಿಲ್ಲ. ಹಿರಿಯ ನಾಯಕರು ನನ್ನನ್ನು ಗುರುತಿಸಿ ಅವಕಾಶ ಕೊಟ್ಟರೆ ಚುನಾವಣೆಗೆ ಸ್ಪರ್ಧಿಸುವಾಗಿ ಪರೋಕ್ಷವಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ಚಂದನ್ ಗೌಡ, ಗ್ರಾಮಾಂತರ ಯೂಥ್ ಅಧ್ಯಕ್ಷ ಕರಳಪುರ ವಿಜಯ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು .

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago