ಮೈಸೂರು

ʼಗ್ಯಾರಂಟಿʼ ನಡಿಗೆ ʼಹಾಡಿʼ ಕಡೆಗೆ : ಹಾಡಿ ಜನರಿಗೆ ಸರ್ಕಾರದ ಸೌಲಭ್ಯ ದೊರಕಿಸಲು ವಿನೂತನ ಪ್ರಯತ್ನ

ಮೈಸೂರು : ಜಿಲ್ಲೆಯಲ್ಲಿ 1,010 ಆದಿವಾಸಿಗಳು ಇಂದಿಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಮುಂದೆ ಬಂದಿಲ್ಲ. ಹಾಗಾಗಿ, ಅವರಿಗೆ ಸೌಲಭ್ಯಗಳನ್ನು ತಲುಪಿಸಲು ‘ಗ್ಯಾರಂಟಿ ನಡಿಗೆ ಹಾಡಿ ಕಡೆಗೆ’ ವಿಶೇಷ ಅಭಿಯಾನವನ್ನು ಆಯೋಜಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿಯ ದೇವರಾಜ ಅರಸು ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಕೆಲವು ಆದಿವಾಸಿಗಳು ಮುಂದೆ ಬಂದಿಲ್ಲ. ಅಂತಹವರನ್ನು ಗುರುತಿಸಿ ಅವರ ಮನೆ ಬಾಗಿಲಿಗೆ ಸೇವೆ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ‘ಗ್ಯಾರಂಟಿ ನಡಿಗೆ ಹಾಡಿ ಕಡೆಗೆ’ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಕೋರಿದರು.

ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಪ್ರೊ.ಶಿವಕುಮಾರ್ ಮಾತನಾಡಿ, ಕಳೆದ ಸಭೆಯಲ್ಲಿ ಅಧಿಕಾರಿಗಳು ನೀಡಿದ ವರದಿಯ ಪ್ರಕಾರ ೧,೦೨೬ ಆದಿವಾಸಿಗಳು ನೋಂದಣಿ ಆಗಿರಲಿಲ್ಲ. ಈ ಪೈಕಿ ಕೇವಲ ೧೬ ಜನರನ್ನು ಮಾತ್ರ ನೋಂದಣಿ ಮಾಡಲಾಗಿದ್ದು, ಇನ್ನೂ ೧,೦೧೦ ಆದಿವಾಸಿಗಳ ನೋಂದಣಿ ಬಾಕಿ ಇದೆ. ಆದಿವಾಸಿಗಳಿಗೆ ಸೌಲಭ್ಯ ತಲುಪಿಸುವ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುವುದು ಸರಿಯಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಜತೆಗೆ ಐಟಿಡಿಪಿ ಅಧಿಕಾರಿಗಳೂ ಜವಾಬ್ದಾರಿ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದರು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಮಟ್ಟದ ಅಽಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಆದಿವಾಸಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.

ಈ ಕುರಿತು ಪ್ರತಿಕ್ರಿಯಿಸಿದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಆದಿವಾಸಿಗಳಿಗೆ ಸೌಲಭ್ಯ ತಲುಪಿಸುವ ವಿಚಾರದಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಐಟಿಡಿಪಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಲಾಗುವುದು ಎಂದರು.

ಸಭೆಯಲ್ಲಿ ಪ್ರಾಧಿಕಾರದ ಉಪಾಧ್ಯಕ್ಷ ಹುಣಸೂರು ಬಸವಣ್ಣ, ಚಂದ್ರಶೇಖರ್, ಸದಸ್ಯರಾದ ಸಾ.ಮಾ. ಯೋಗೀಶ್, ಉದಯಶಂಕರ್, ಮಹದೇವು, ಉತ್ತನಹಳ್ಳಿ ಶಿವಣ್ಣ ಹಾಗೂ ಇತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

14 mins ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

48 mins ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

2 hours ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

3 hours ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

8 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

8 hours ago