ಮೈಸೂರು

ಉಪನ್ಯಾಸಕರ ಸೇವೆಯಲ್ಲಿ ಮುಂದುವರಿಸಿ: ಅತಿಥಿ ಉಪನ್ಯಾಸಕರ ಅಹೋರಾತ್ರಿ ‍ಪ್ರತಿಭಟನೆ!

ಮೈಸೂರು: ದಶಕದಿಂದಲೂ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಸೋಮವಾರ ಅಹೋರಾತ್ರಿ ‍ಪ್ರತಿಭಟನೆ ನಡೆಸಿದರು.

ಇಲ್ಲಿನ ಕ್ರಾಫರ್ಡ್‌ ಭವನದ ಎದುರು ಜಮಾಯಿಸಿದ ಮೈಸೂರು ವಿವಿ ಅತಿಥಿ ಉಪನ್ಯಾಸಕರು, ಪ್ರತಿಭಟನಕಾರರು, ವಿಶ್ವವಿದ್ಯಾಲಯದ ಕುಲಪತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಪಾಪಣ್ಣ ಮಾತನಾಡಿ, ‘ಹತ್ತಾರು ವರ್ಷದಿಂದ ಅರ್ಹತೆಯ ಆಧಾರದ ಮೇಲೆ ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಮೂರ್ನಾಲ್ಕು ಸಂದರ್ಶನ ನೀಡಿಯೇ ನೌಕರಿ ಮುಂದುವರಿಸಿದ್ದೇವೆ. ಈಗ ಮರು ಸಂದರ್ಶನ ಮಾಡಿ ಅವಮಾನಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

‘ನೆಟ್‌, ಕೆ–ಸೆಟ್‌ ಪರೀಕ್ಷೆಯಲ್ಲಿ ಉತ್ತೀರ್ಣರಾದವರು, ಪಿಎಚ್‌ಡಿ ಪದವಿ ಪಡೆದ 600ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದು, ಎಲ್ಲರನ್ನೂ ಮುಂದುವರಿಸಬೇಕು. ಯಾರು ಸರಿಯಾಗಿ ಕೆಲಸ ಮಾಡುತ್ತಿಲ್ಲವೂ ಅವರನ್ನು ತೆಗೆದುಹಾಕಿ, ಅವರಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಿ. ಆದರೆ, ಎಲ್ಲರನ್ನೂ ಒಂದೇ ಎಂದು ಪರಿಗಣಿಸಿರುವುದು ಸರಿಯಲ್ಲ’ ಎಂದು ಕಿಡಿಕಾರಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ, ಉಪಾಧ್ಯಕ್ಷರಾದ ದಿನಮಣಿ, ರಾಘವೇಂದ್ರ, ಕಾರ್ಯದರ್ಶಿ ಹರ್ಷ, ಅತಿಥಿ ಉಪನ್ಯಾಸಕರಾದ ಡಾ. ಕೆ.ಪಿ ರಮೇಶ್‌ ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

17 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

13 hours ago