ಗುಂಡ್ಲುಪೇಟೆ : ಕೂಂಬಿಂಗ್ ನಡೆಸುವ ವೇಳೆ ಚಿರತೆಯು ಅರಣ್ಯ ಇಲಾಖೆಯ ಆನೆ ಕಾವಲುಪಡೆ ಸಿಬ್ಬಂದಿ ಬಂಗಾರ್ ಎಂಬುವವರ ಮೇಲೆ ದಾಳಿ ನಡೆಸಿ ಕತ್ತು, ತಲೆ ಹಾಗೂ ಕೈ ಗಳನ್ನು ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ.
ತಾಲ್ಲೂಕಿನ ಯಡವನಹಳ್ಳಿ ಬಳಿ ಚಿರತೆ ಮೇಕೆಯನ್ನು ಒತ್ತೊಯ್ದಿದೆ. ಈ ವೇಳೆ ರೈತರು ಓಂಕಾರ್ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅನೆ ಕಾವಲು ಪಡೆಯ ಸಿಬ್ಬಂದಿಗಳು ಕೂಂಬಿಂಗ್ ನಡೆಯುವ ವೇಳೆ ಈ ಘಟನೆ ನಡೆದಿದೆ.
ಇದನ್ನೂ ಓದಿ: ಸಂಪುಟ ಪುನರ್ ರಚನೆ ವಿಚಾರ: ಈ ಬಾರಿ ಅವಕಾಶ ಸಿಗುತ್ತೆ ಎನ್ನುವ ನಂಬಿಕೆಯಿದೆ ಎಂದ ತನ್ವೀರ್ ಸೇಠ್
ಈ ಸಂದರ್ಭದಲ್ಲಿ ಕೂಗಾಡಿ ಪಟಾಕಿ ಹೊಡೆದು ಕೂಗಿಕೊಂಡಾಗ ಚಿರತೆ ಓಡಿ ಹೊಗಿದೆ, ಘಟನೆಯ ನಂತರ ಸುತ್ತಮುತ್ತಲಿನ ಗ್ರಾಮಸ್ಥರು ಗಾಬರಿಯಾಗಿದ್ದು ಹೊರಗೆ ಓಡಾಡಲು ಭಯಭೀತರಾಗಿದ್ದಾರೆ.
ಇನ್ನೂ ಶುಕ್ರವಾರ ಸಂಜೆ ಕುರುಬರಹುಂಡಿ ಬಳಿ ಗ್ರಾಮದ ಮಹೇಶ್ ಎಂಬುವವರು ತೊಟದ ಮನೆಯಿಂದ ಹಾಲು ಕರೆದುಕೊಂಡು ಗ್ರಾಮದ ಕಡೆ ಬರುವಾಗ ಹುಲಿ ರಸ್ತೆಯಲ್ಲಿ ನಿಂತಿದನ್ನು ನೋಡಿದ್ದಾರೆ. ಆವಾಗ ಮಹೇಶ್ ಮತ್ತೆ ತೊಟದ ಮನೆ ಕಡೆ ಒಡಿ ಹೊಗಿದ್ದಾರೆ. ಈ ಭಾಗದಲ್ಲಿ ಹುಲಿ, ಚಿರತೆ ಸಂಖ್ಯೆ ಹೆಚ್ಚಿದ್ದು ಅರಣ್ಯ ಇಲಾಖೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು…
ಮಹಾದೇಶ್ ಎಂ ಗೌಡ ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ…
ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು…
ಮೈಸೂರು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯ ಮಣಿಪಾಲ್ ಜಂಕ್ಷನ್ ಫ್ಲೈಓವರ್…
ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್…