ಗುಂಡ್ಲುಪೇಟೆ : ಕೂಂಬಿಂಗ್ ನಡೆಸುವ ವೇಳೆ ಚಿರತೆಯು ಅರಣ್ಯ ಇಲಾಖೆಯ ಆನೆ ಕಾವಲುಪಡೆ ಸಿಬ್ಬಂದಿ ಬಂಗಾರ್ ಎಂಬುವವರ ಮೇಲೆ ದಾಳಿ ನಡೆಸಿ ಕತ್ತು, ತಲೆ ಹಾಗೂ ಕೈ ಗಳನ್ನು ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ.
ತಾಲ್ಲೂಕಿನ ಯಡವನಹಳ್ಳಿ ಬಳಿ ಚಿರತೆ ಮೇಕೆಯನ್ನು ಒತ್ತೊಯ್ದಿದೆ. ಈ ವೇಳೆ ರೈತರು ಓಂಕಾರ್ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅನೆ ಕಾವಲು ಪಡೆಯ ಸಿಬ್ಬಂದಿಗಳು ಕೂಂಬಿಂಗ್ ನಡೆಯುವ ವೇಳೆ ಈ ಘಟನೆ ನಡೆದಿದೆ.
ಇದನ್ನೂ ಓದಿ: ಸಂಪುಟ ಪುನರ್ ರಚನೆ ವಿಚಾರ: ಈ ಬಾರಿ ಅವಕಾಶ ಸಿಗುತ್ತೆ ಎನ್ನುವ ನಂಬಿಕೆಯಿದೆ ಎಂದ ತನ್ವೀರ್ ಸೇಠ್
ಈ ಸಂದರ್ಭದಲ್ಲಿ ಕೂಗಾಡಿ ಪಟಾಕಿ ಹೊಡೆದು ಕೂಗಿಕೊಂಡಾಗ ಚಿರತೆ ಓಡಿ ಹೊಗಿದೆ, ಘಟನೆಯ ನಂತರ ಸುತ್ತಮುತ್ತಲಿನ ಗ್ರಾಮಸ್ಥರು ಗಾಬರಿಯಾಗಿದ್ದು ಹೊರಗೆ ಓಡಾಡಲು ಭಯಭೀತರಾಗಿದ್ದಾರೆ.
ಇನ್ನೂ ಶುಕ್ರವಾರ ಸಂಜೆ ಕುರುಬರಹುಂಡಿ ಬಳಿ ಗ್ರಾಮದ ಮಹೇಶ್ ಎಂಬುವವರು ತೊಟದ ಮನೆಯಿಂದ ಹಾಲು ಕರೆದುಕೊಂಡು ಗ್ರಾಮದ ಕಡೆ ಬರುವಾಗ ಹುಲಿ ರಸ್ತೆಯಲ್ಲಿ ನಿಂತಿದನ್ನು ನೋಡಿದ್ದಾರೆ. ಆವಾಗ ಮಹೇಶ್ ಮತ್ತೆ ತೊಟದ ಮನೆ ಕಡೆ ಒಡಿ ಹೊಗಿದ್ದಾರೆ. ಈ ಭಾಗದಲ್ಲಿ ಹುಲಿ, ಚಿರತೆ ಸಂಖ್ಯೆ ಹೆಚ್ಚಿದ್ದು ಅರಣ್ಯ ಇಲಾಖೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…