ಗುಂಡ್ಲುಪೇಟೆ : ಕೂಂಬಿಂಗ್ ನಡೆಸುವ ವೇಳೆ ಚಿರತೆಯು ಅರಣ್ಯ ಇಲಾಖೆಯ ಆನೆ ಕಾವಲುಪಡೆ ಸಿಬ್ಬಂದಿ ಬಂಗಾರ್ ಎಂಬುವವರ ಮೇಲೆ ದಾಳಿ ನಡೆಸಿ ಕತ್ತು, ತಲೆ ಹಾಗೂ ಕೈ ಗಳನ್ನು ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ.
ತಾಲ್ಲೂಕಿನ ಯಡವನಹಳ್ಳಿ ಬಳಿ ಚಿರತೆ ಮೇಕೆಯನ್ನು ಒತ್ತೊಯ್ದಿದೆ. ಈ ವೇಳೆ ರೈತರು ಓಂಕಾರ್ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅನೆ ಕಾವಲು ಪಡೆಯ ಸಿಬ್ಬಂದಿಗಳು ಕೂಂಬಿಂಗ್ ನಡೆಯುವ ವೇಳೆ ಈ ಘಟನೆ ನಡೆದಿದೆ.
ಇದನ್ನೂ ಓದಿ: ಸಂಪುಟ ಪುನರ್ ರಚನೆ ವಿಚಾರ: ಈ ಬಾರಿ ಅವಕಾಶ ಸಿಗುತ್ತೆ ಎನ್ನುವ ನಂಬಿಕೆಯಿದೆ ಎಂದ ತನ್ವೀರ್ ಸೇಠ್
ಈ ಸಂದರ್ಭದಲ್ಲಿ ಕೂಗಾಡಿ ಪಟಾಕಿ ಹೊಡೆದು ಕೂಗಿಕೊಂಡಾಗ ಚಿರತೆ ಓಡಿ ಹೊಗಿದೆ, ಘಟನೆಯ ನಂತರ ಸುತ್ತಮುತ್ತಲಿನ ಗ್ರಾಮಸ್ಥರು ಗಾಬರಿಯಾಗಿದ್ದು ಹೊರಗೆ ಓಡಾಡಲು ಭಯಭೀತರಾಗಿದ್ದಾರೆ.
ಇನ್ನೂ ಶುಕ್ರವಾರ ಸಂಜೆ ಕುರುಬರಹುಂಡಿ ಬಳಿ ಗ್ರಾಮದ ಮಹೇಶ್ ಎಂಬುವವರು ತೊಟದ ಮನೆಯಿಂದ ಹಾಲು ಕರೆದುಕೊಂಡು ಗ್ರಾಮದ ಕಡೆ ಬರುವಾಗ ಹುಲಿ ರಸ್ತೆಯಲ್ಲಿ ನಿಂತಿದನ್ನು ನೋಡಿದ್ದಾರೆ. ಆವಾಗ ಮಹೇಶ್ ಮತ್ತೆ ತೊಟದ ಮನೆ ಕಡೆ ಒಡಿ ಹೊಗಿದ್ದಾರೆ. ಈ ಭಾಗದಲ್ಲಿ ಹುಲಿ, ಚಿರತೆ ಸಂಖ್ಯೆ ಹೆಚ್ಚಿದ್ದು ಅರಣ್ಯ ಇಲಾಖೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…