ಮೈಸೂರು

ಗುಂಡ್ಲುಪೇಟೆ : ಕೂಂಬಿಂಗ್ ವೇಳೆ ಅರಣ್ಯಾಧಿಕಾರಿ ಮೇಲೆ ಚಿರತೆ ದಾಳಿ ; ಗಾಂಭೀರ ಗಾಯ

ಗುಂಡ್ಲುಪೇಟೆ : ಕೂಂಬಿಂಗ್ ನಡೆಸುವ ವೇಳೆ ಚಿರತೆಯು ಅರಣ್ಯ ಇಲಾಖೆಯ ಆನೆ ಕಾವಲುಪಡೆ ಸಿಬ್ಬಂದಿ ಬಂಗಾರ್ ಎಂಬುವವರ ಮೇಲೆ ದಾಳಿ ನಡೆಸಿ ಕತ್ತು, ತಲೆ ಹಾಗೂ ಕೈ ಗಳನ್ನು ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ.

ತಾಲ್ಲೂಕಿನ ಯಡವನಹಳ್ಳಿ ಬಳಿ ಚಿರತೆ ಮೇಕೆಯನ್ನು ಒತ್ತೊಯ್ದಿದೆ. ಈ ವೇಳೆ ರೈತರು ಓಂಕಾರ್ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅನೆ ಕಾವಲು ಪಡೆಯ ಸಿಬ್ಬಂದಿಗಳು ಕೂಂಬಿಂಗ್‌ ನಡೆಯುವ ವೇಳೆ ಈ ಘಟನೆ ನಡೆದಿದೆ.

ಇದನ್ನೂ ಓದಿ: ಸಂಪುಟ ಪುನರ್ ರಚನೆ ವಿಚಾರ: ಈ ಬಾರಿ ಅವಕಾಶ ಸಿಗುತ್ತೆ ಎನ್ನುವ ನಂಬಿಕೆಯಿದೆ ಎಂದ ತನ್ವೀರ್‌ ಸೇಠ್‌

ಈ ಸಂದರ್ಭದಲ್ಲಿ ಕೂಗಾಡಿ ಪಟಾಕಿ ಹೊಡೆದು ಕೂಗಿಕೊಂಡಾಗ ಚಿರತೆ ಓಡಿ ಹೊಗಿದೆ, ಘಟನೆಯ ನಂತರ ಸುತ್ತಮುತ್ತಲಿನ ಗ್ರಾಮಸ್ಥರು ಗಾಬರಿಯಾಗಿದ್ದು ಹೊರಗೆ ಓಡಾಡಲು ಭಯಭೀತರಾಗಿದ್ದಾರೆ.

ಇನ್ನೂ ಶುಕ್ರವಾರ ಸಂಜೆ ಕುರುಬರಹುಂಡಿ ಬಳಿ ಗ್ರಾಮದ ಮಹೇಶ್ ಎಂಬುವವರು ತೊಟದ ಮನೆಯಿಂದ ಹಾಲು ಕರೆದುಕೊಂಡು ಗ್ರಾಮದ ಕಡೆ ಬರುವಾಗ ಹುಲಿ ರಸ್ತೆಯಲ್ಲಿ ನಿಂತಿದನ್ನು ನೋಡಿದ್ದಾರೆ. ಆವಾಗ ಮಹೇಶ್ ಮತ್ತೆ ತೊಟದ ಮನೆ ಕಡೆ ಒಡಿ ಹೊಗಿದ್ದಾರೆ. ಈ ಭಾಗದಲ್ಲಿ ಹುಲಿ, ಚಿರತೆ ಸಂಖ್ಯೆ ಹೆಚ್ಚಿದ್ದು ಅರಣ್ಯ ಇಲಾಖೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

4 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

4 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

4 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

4 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

4 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

4 hours ago