ಗುಂಡ್ಲುಪೇಟೆ : ಕೂಂಬಿಂಗ್ ನಡೆಸುವ ವೇಳೆ ಚಿರತೆಯು ಅರಣ್ಯ ಇಲಾಖೆಯ ಆನೆ ಕಾವಲುಪಡೆ ಸಿಬ್ಬಂದಿ ಬಂಗಾರ್ ಎಂಬುವವರ ಮೇಲೆ ದಾಳಿ ನಡೆಸಿ ಕತ್ತು, ತಲೆ ಹಾಗೂ ಕೈ ಗಳನ್ನು ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ.
ತಾಲ್ಲೂಕಿನ ಯಡವನಹಳ್ಳಿ ಬಳಿ ಚಿರತೆ ಮೇಕೆಯನ್ನು ಒತ್ತೊಯ್ದಿದೆ. ಈ ವೇಳೆ ರೈತರು ಓಂಕಾರ್ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅನೆ ಕಾವಲು ಪಡೆಯ ಸಿಬ್ಬಂದಿಗಳು ಕೂಂಬಿಂಗ್ ನಡೆಯುವ ವೇಳೆ ಈ ಘಟನೆ ನಡೆದಿದೆ.
ಇದನ್ನೂ ಓದಿ: ಸಂಪುಟ ಪುನರ್ ರಚನೆ ವಿಚಾರ: ಈ ಬಾರಿ ಅವಕಾಶ ಸಿಗುತ್ತೆ ಎನ್ನುವ ನಂಬಿಕೆಯಿದೆ ಎಂದ ತನ್ವೀರ್ ಸೇಠ್
ಈ ಸಂದರ್ಭದಲ್ಲಿ ಕೂಗಾಡಿ ಪಟಾಕಿ ಹೊಡೆದು ಕೂಗಿಕೊಂಡಾಗ ಚಿರತೆ ಓಡಿ ಹೊಗಿದೆ, ಘಟನೆಯ ನಂತರ ಸುತ್ತಮುತ್ತಲಿನ ಗ್ರಾಮಸ್ಥರು ಗಾಬರಿಯಾಗಿದ್ದು ಹೊರಗೆ ಓಡಾಡಲು ಭಯಭೀತರಾಗಿದ್ದಾರೆ.
ಇನ್ನೂ ಶುಕ್ರವಾರ ಸಂಜೆ ಕುರುಬರಹುಂಡಿ ಬಳಿ ಗ್ರಾಮದ ಮಹೇಶ್ ಎಂಬುವವರು ತೊಟದ ಮನೆಯಿಂದ ಹಾಲು ಕರೆದುಕೊಂಡು ಗ್ರಾಮದ ಕಡೆ ಬರುವಾಗ ಹುಲಿ ರಸ್ತೆಯಲ್ಲಿ ನಿಂತಿದನ್ನು ನೋಡಿದ್ದಾರೆ. ಆವಾಗ ಮಹೇಶ್ ಮತ್ತೆ ತೊಟದ ಮನೆ ಕಡೆ ಒಡಿ ಹೊಗಿದ್ದಾರೆ. ಈ ಭಾಗದಲ್ಲಿ ಹುಲಿ, ಚಿರತೆ ಸಂಖ್ಯೆ ಹೆಚ್ಚಿದ್ದು ಅರಣ್ಯ ಇಲಾಖೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…