ನಂಜನಗೂಡು: ಪುರಾಣ ಪ್ರಸಿದ್ಧ ದಕ್ಷಿಣಕಾಶಿ ಎಂದೇ ಪ್ರಸಿದ್ಧವಾದ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಗುರು ಪೌರ್ಣಿಮೆ ಪ್ರಯುಕ್ತ
ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು.
ಗುರು ಪೌರ್ಣಿಮೆ ಪ್ರಯುಕ್ತ ಶ್ರೀಕಂಠೇಶ್ವರಸ್ವಾಮಿಗೆ ಚಿನ್ನದ ಕೊಳಗ ತೊಡಿಸಿ, ನಾನಾ ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಇಂದು ಶ್ರೀಕಂಠೇಶ್ವರನಿಗೆ ಪಂಚತೀರ್ಥಗಳ ಅಭಿಷೇಕ, ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಕಲ್ಲು ಸಕ್ಕರೆ ಅಭಿಷೇಕ ಸೇರಿದಂತೆ ಅನೇಕ ಪೂಜೆಗಳನ್ನು ನೆರವೇರಿಸಲಾಯಿತು. ನಂತರ ದೇವರಿಗೆ ಮಹಾಮಂಗಳಾರತಿಯನ್ನು ಮಾಡಿ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.
ಇನ್ನೂ ದೇವಾಲಯಕ್ಕೆ ಬಂದ ಭಕ್ತರು ಕಪಿಲಾ ನದಿ ಬಳಿ ತೆರಳದೇ, ಸಲೀಸಾಗಿ ದೇವಸ್ಥಾನಕ್ಕೆ ಹೋಗಿ ಶ್ರೀಕಂಠೇಶ್ವರನಿಗೆ ಪೂಜೆ ಸಲ್ಲಿಸಿದರು. ಗುರುಪೌರ್ಣಿಮೆ ಪ್ರಯುಕ್ತ ಇಂದು ಸಾವಿರಾರು ಭಕ್ತರು ಶ್ರೀಕಂಠೇಶ್ವರನ ದರ್ಶನ ಪಡೆದು ಪುನೀತರಾದರು.
ದೇವಾಲಯದ ದಾಸೋಹ ಭವನದಲ್ಲಿ ಹುಣ್ಣಿಮೆ ಅಂಗವಾಗಿ ಭಕ್ತರಿಗೆ ಪ್ರಸಾದದ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.
ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…