ಮೈಸೂರು

ಸಂಭ್ರಮದ ಗುರು ಪೂರ್ಣಿಮೆ

ಮೈಸೂರು : ಗುರು ಪೂರ್ಣಿಮೆ ಅಂಗವಾಗಿ ನಗರದಾದ್ಯಂತ ವಿವಿಧ ದೇವಾಲಯಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಗಳು ನಡೆದವು. ಈ ಕಾರ್ಯಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.

ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಗುರು ರಾಘವೇಂದ್ರ ದೇವಾಲಯ, ಕೃಷ್ಣಮೂರ್ತಿ ಪುರಂ, ಕುವೆಂಪುನಗರ, ಜಯಲಕ್ಷಿ ಪುರಂ, ಉತ್ತನಹಳ್ಳಿ ಸೇರಿದಂತೆ ನಗರದ ವಿವಿದೆಡೆ ಇರುವ ರಾಘವೇಂದ್ರ ಸ್ವಾಮಿ ದೇವಾಲಯಗಳಲ್ಲಿ ಗುರುವಾರ ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.

ಗುರುವಾರ ಬೆಳಗಿನ ಜಾವದಿಂದಲೇ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಗಳು ಆರಂಭವಾದವು, ಕಳಸ ಪೂಜೆ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ ಸೇರಿದಂತೆ ವಿವಿಧ ಪೂಜೆಗಳನ್ನು ನಡೆಸಲಾಯಿತು. ಮದ್ಯಾಹ್ನ ಸಾವಿರಾರು ಮಮದಿಗೆ ಪ್ರಸಾದ ವಿನಿಯೋಗಿಸಲಾಯಿತು. ವಿವಿಧ ದೇವಾಲಯಗಳಲ್ಲಿ ಸಂಜೆ ಸಂಗೀತ ಹಾಗೂ ಭಕ್ತಿ ಗೀತೆಗಳ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಇನ್ನು ನಗರದ ತ್ಯಾಗರಾಜ ರಸ್ತೆ, ರಾಮಾನುಜ ರಸ್ತೆ, ರಾಮಕೃಷ್ಣನಗರ ಸೇರಿದಂತೆ ನಗರದ ವಿವಿದೆಡೆ ಶಿರಢಿ ಸಾಯಿಬಾಬ ದೇವಾಲಯಗಳಲ್ಲಿ ಕೂಡ ಗುರುವಾರ ಬೆಳಿಗ್ಗೆಯಿಂದಲೇ ಕಾಕಡಾರತಿ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳನ್ನು ನಡೆಸಲಾಯಿತು. ಅಲ್ಲಿಯೂ ಕೂಡ ಸಾವಿರಾರು ಮಂದಿಗೆ ಮದ್ಯಾಹ್ನ ಹಾಗೂ ಸಂಜೆ ಪ್ರಸಾದ ವಿತರಿಸಲಾಯಿತು.

ಗುರು ಪೂರ್ಣಿಮೆಯ ಮಹತ್ವ: ಗುರು ಪೂರ್ಣಿಮಾದ ಶುಭ ದಿನವನ್ನು ಆಷಾಢ ಪೂರ್ಣಿಮಾವೆಂದೂ ಕರೆಯುತ್ತಾರೆ. ಇದು ಆಷಾಢ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಾಗಿದೆ. ಈ ಶುಭ ದಿನದಂದು ನಾವು ನಮ್ಮ ಹಿರಿಯರಿಗೆ, ಗುರುಗಳಿಗೆ ಗೌರವವನ್ನು, ಕೃತಜ್ಞತೆಯನ್ನು ಸಲ್ಲಿಸುತ್ತೇವೆ.

ಬುದ್ದರು ಧರ್ಮೋಪದೇಶ ನೀಡಿದ ದಿನ:- ಬೌದ್ಧ ಧರ್ಮದ ಸ್ಥಾಪಕ ಗೌತಮ ಬುದ್ಧನು ಜ್ಞಾನೋದಯವನ್ನು ಪಡೆದ ನಂತರ ಸಾರನಾಥದಲ್ಲಿ ತನ್ನ ಮೊದಲ ಧರ್ಮೋಪದೇಶವನ್ನು ನೀಡಿದ ಕಾರಣ ಬೌದ್ಧ ಧರ್ಮದ ಅನುಯಾಯಿಗಳಿಗೆ ಗುರು ಪೂರ್ಣಿಮಾ ಪ್ರಮುಖ ದಿನವಾಗಿದೆ. ಬೌದ್ಧರು ಗೌತಮ ಬುದ್ಧನಿಗೆ ಗೌರವ ಸಲ್ಲಿಸಲು ಗುರು ಪೂರ್ಣಿಮೆಯನ್ನು ಆಚರಿಸುತ್ತಾರೆ.

ಈ ಕಾರಣಕ್ಕಾಗಿ ಹಿಂದೂ ಧರ್ಮದಲ್ಲಿ ಗುರು ಪೂರ್ಣಿಮಾಕ್ಕೆ ವಿಶೇಷ ಮಹತ್ವವನ್ನು ನೀಡಲಾಗಿದೆ. ಈ ದಿನ ಮಹರ್ಷಿ ವ್ಯಾಸರು ಜನಿಸಿದ್ದರು ಎನ್ನುವ ಕಾರಣಕ್ಕಾಗಿ ಇದನ್ನು ವ್ಯಾಸ ಪೂರ್ಣಿಮಾವೆಂದೂ ಕರೆಯಲಾಗುತ್ತದೆ. ವ್ಯಾಸರು ಹಿಂದೂ ಧರ್ಮಕ್ಕೆ ಸಂಬಂಧಿಸಿದ ಶ್ರೇಷ್ಠ ಮಹಾಕಾವ್ಯಗಳಲ್ಲಿ ಒಂದಾದ ಮಹಾಭಾರತವನ್ನು ರಚಿಸಿದವರು.

ದೇಶದ ನಾನಾ ಭಾಗಗಳಲ್ಲಿ ಜನರು ಗುರುಗಳನ್ನು ಸ್ಮರಿಸುತ್ತಾ ಗುರು ಪೂರ್ಣಿಮಾವನ್ನು ಸಂಭ್ರಮಿಸುತ್ತಾರೆ. ಈ ದಿನದಂದು ಗುರುವಿನ ಆಶೀರ್ವಾದವನ್ನು ಕೋರುತ್ತಾ ಶುಭಾಶಯಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

9 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

11 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

11 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

11 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

12 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

12 hours ago