ಮೈಸೂರು

ನಂಜನಗೂಡಿನ ರಾಯರ ಮಠದಲ್ಲಿ ಗುರುಪೂರ್ಣಿಮೆ ಸಂಭ್ರಮ

ಮೈಸೂರು : ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿರುವ ರಾಯರ ಮಠದಲ್ಲಿ ಗುರುಪೂರ್ಣಿಮೆ ಸಂಭ್ರಮ ಮನೆಮಾಡಿತ್ತು. ಈ ಮಠಕ್ಕೆ ರಾಘವೇಂದ್ರ ಸ್ವಾಮಿಗಳ ಮೂಲಮಠವೆಂದೂ ಸಹ ಕರೆಯಲಾಗುತ್ತಿದೆ. ಮುಂಜಾನೆಯಿಂದಲೇ ಗುರುಪೂರ್ಣಿಮೆ ಪ್ರಯುಕ್ತ ರಾಘವೇಂದ್ರ ಸ್ವಾಮಿಗಳ ಮೂರ್ತಿಗೆ ವಿಶೇಷವಾದ ಪೂಜೆ ಸಲ್ಲಿಸಲಾಯಿತು.ಅಲ್ಲದೆ ಭಕ್ತರ ದಂಡೇ ಮಠಕ್ಕೆ ಹರಿದು ಬರುತ್ತಿದ್ದು, ರಾಯರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ಈ ಮಠಕ್ಕೆ ಮಧ್ವಾಚಾರ್ಯರ ಮೂಲಸ್ಥಾನ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠ ಎಂದು ಹೇಳುತ್ತಾರೆ. ಅಲ್ಲದೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ದೇಶ ಪರ್ಯಟನೆ ಮಾಡುತ್ತಿದ್ದಾಗ ಈ ಮಠಕ್ಕೂ ಭೇಟಿ ನೀಡಿದ್ದರು. ಆದ್ದರಿಂದ ಇಲ್ಲಿ ಮೂಲದೇವರು ಶ್ರೀ ರಾಘವೇಂದ್ರ ಸ್ವಾಮಿಗಳು ಎಂದು ಹೇಳುತ್ತಾರೆ. ಪ್ರತಿನಿತ್ಯವೂ ಕೂಡ ಹೆಚ್ಚಿನ ಭಕ್ತರು ಈ ಮಠಕ್ಕೆ ಭೇಟಿ ನೀಡಿ ಮದುವೆ ಕಾರ್ಯಗಳು, ವಿದ್ಯಾಭ್ಯಾಸ ಸಂಬಂಧಪಟ್ಟಂತೆ , ಕೆಲಸದ ವಿಚಾರ, ಹಣಕಾಸಿನ ವ್ಯವಹಾರಗಳ ಬಗ್ಗೆ ಪೂಜಾ ಕೈಂಕರ್ಯಗಳನ್ನ ಮಾಡಿಸುತ್ತಾರೆ,

ಇನ್ನು ಈ ದೇವಾಲಯದಲ್ಲಿ ರಾಘವೇಂದ್ರಸ್ವಾಮಿಗಳು ಮೂಲ ದೇವರು ಹಾಗೂ ಆಂಜನೇಯ ದೇವರನ್ನ ಇಲ್ಲಿ ಕಾಣಬಹುದು. ಅಲ್ಲದೆ ರಾಯರ ಮಠದಲ್ಲಿ ಪಂಚ ಬೃಂದಾವನ ಒಳಗೊಂಡಿದೆ. ತೀರ್ಥರು ಐಕ್ಯವಾದ ಸ್ಥಳಗಳನ್ನ ಇಲ್ಲಿ ಕಾಣಬಹುದು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

9 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

9 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

9 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

9 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

10 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

11 hours ago