ಮೈಸೂರು : ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿರುವ ರಾಯರ ಮಠದಲ್ಲಿ ಗುರುಪೂರ್ಣಿಮೆ ಸಂಭ್ರಮ ಮನೆಮಾಡಿತ್ತು. ಈ ಮಠಕ್ಕೆ ರಾಘವೇಂದ್ರ ಸ್ವಾಮಿಗಳ ಮೂಲಮಠವೆಂದೂ ಸಹ ಕರೆಯಲಾಗುತ್ತಿದೆ. ಮುಂಜಾನೆಯಿಂದಲೇ ಗುರುಪೂರ್ಣಿಮೆ ಪ್ರಯುಕ್ತ ರಾಘವೇಂದ್ರ ಸ್ವಾಮಿಗಳ ಮೂರ್ತಿಗೆ ವಿಶೇಷವಾದ ಪೂಜೆ ಸಲ್ಲಿಸಲಾಯಿತು.ಅಲ್ಲದೆ ಭಕ್ತರ ದಂಡೇ ಮಠಕ್ಕೆ ಹರಿದು ಬರುತ್ತಿದ್ದು, ರಾಯರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಈ ಮಠಕ್ಕೆ ಮಧ್ವಾಚಾರ್ಯರ ಮೂಲಸ್ಥಾನ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠ ಎಂದು ಹೇಳುತ್ತಾರೆ. ಅಲ್ಲದೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ದೇಶ ಪರ್ಯಟನೆ ಮಾಡುತ್ತಿದ್ದಾಗ ಈ ಮಠಕ್ಕೂ ಭೇಟಿ ನೀಡಿದ್ದರು. ಆದ್ದರಿಂದ ಇಲ್ಲಿ ಮೂಲದೇವರು ಶ್ರೀ ರಾಘವೇಂದ್ರ ಸ್ವಾಮಿಗಳು ಎಂದು ಹೇಳುತ್ತಾರೆ. ಪ್ರತಿನಿತ್ಯವೂ ಕೂಡ ಹೆಚ್ಚಿನ ಭಕ್ತರು ಈ ಮಠಕ್ಕೆ ಭೇಟಿ ನೀಡಿ ಮದುವೆ ಕಾರ್ಯಗಳು, ವಿದ್ಯಾಭ್ಯಾಸ ಸಂಬಂಧಪಟ್ಟಂತೆ , ಕೆಲಸದ ವಿಚಾರ, ಹಣಕಾಸಿನ ವ್ಯವಹಾರಗಳ ಬಗ್ಗೆ ಪೂಜಾ ಕೈಂಕರ್ಯಗಳನ್ನ ಮಾಡಿಸುತ್ತಾರೆ,
ಇನ್ನು ಈ ದೇವಾಲಯದಲ್ಲಿ ರಾಘವೇಂದ್ರಸ್ವಾಮಿಗಳು ಮೂಲ ದೇವರು ಹಾಗೂ ಆಂಜನೇಯ ದೇವರನ್ನ ಇಲ್ಲಿ ಕಾಣಬಹುದು. ಅಲ್ಲದೆ ರಾಯರ ಮಠದಲ್ಲಿ ಪಂಚ ಬೃಂದಾವನ ಒಳಗೊಂಡಿದೆ. ತೀರ್ಥರು ಐಕ್ಯವಾದ ಸ್ಥಳಗಳನ್ನ ಇಲ್ಲಿ ಕಾಣಬಹುದು.
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…
ಮೈಸೂರು : ಮೈಸೂರಿನ ರೇಸ್ಕ್ಲಬ್ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…