ಮೈಸೂರು

ನಂಜನಗೂಡಿನ ರಾಯರ ಮಠದಲ್ಲಿ ಗುರುಪೂರ್ಣಿಮೆ ಸಂಭ್ರಮ

ಮೈಸೂರು : ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿರುವ ರಾಯರ ಮಠದಲ್ಲಿ ಗುರುಪೂರ್ಣಿಮೆ ಸಂಭ್ರಮ ಮನೆಮಾಡಿತ್ತು. ಈ ಮಠಕ್ಕೆ ರಾಘವೇಂದ್ರ ಸ್ವಾಮಿಗಳ ಮೂಲಮಠವೆಂದೂ ಸಹ ಕರೆಯಲಾಗುತ್ತಿದೆ. ಮುಂಜಾನೆಯಿಂದಲೇ ಗುರುಪೂರ್ಣಿಮೆ ಪ್ರಯುಕ್ತ ರಾಘವೇಂದ್ರ ಸ್ವಾಮಿಗಳ ಮೂರ್ತಿಗೆ ವಿಶೇಷವಾದ ಪೂಜೆ ಸಲ್ಲಿಸಲಾಯಿತು.ಅಲ್ಲದೆ ಭಕ್ತರ ದಂಡೇ ಮಠಕ್ಕೆ ಹರಿದು ಬರುತ್ತಿದ್ದು, ರಾಯರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ಈ ಮಠಕ್ಕೆ ಮಧ್ವಾಚಾರ್ಯರ ಮೂಲಸ್ಥಾನ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠ ಎಂದು ಹೇಳುತ್ತಾರೆ. ಅಲ್ಲದೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ದೇಶ ಪರ್ಯಟನೆ ಮಾಡುತ್ತಿದ್ದಾಗ ಈ ಮಠಕ್ಕೂ ಭೇಟಿ ನೀಡಿದ್ದರು. ಆದ್ದರಿಂದ ಇಲ್ಲಿ ಮೂಲದೇವರು ಶ್ರೀ ರಾಘವೇಂದ್ರ ಸ್ವಾಮಿಗಳು ಎಂದು ಹೇಳುತ್ತಾರೆ. ಪ್ರತಿನಿತ್ಯವೂ ಕೂಡ ಹೆಚ್ಚಿನ ಭಕ್ತರು ಈ ಮಠಕ್ಕೆ ಭೇಟಿ ನೀಡಿ ಮದುವೆ ಕಾರ್ಯಗಳು, ವಿದ್ಯಾಭ್ಯಾಸ ಸಂಬಂಧಪಟ್ಟಂತೆ , ಕೆಲಸದ ವಿಚಾರ, ಹಣಕಾಸಿನ ವ್ಯವಹಾರಗಳ ಬಗ್ಗೆ ಪೂಜಾ ಕೈಂಕರ್ಯಗಳನ್ನ ಮಾಡಿಸುತ್ತಾರೆ,

ಇನ್ನು ಈ ದೇವಾಲಯದಲ್ಲಿ ರಾಘವೇಂದ್ರಸ್ವಾಮಿಗಳು ಮೂಲ ದೇವರು ಹಾಗೂ ಆಂಜನೇಯ ದೇವರನ್ನ ಇಲ್ಲಿ ಕಾಣಬಹುದು. ಅಲ್ಲದೆ ರಾಯರ ಮಠದಲ್ಲಿ ಪಂಚ ಬೃಂದಾವನ ಒಳಗೊಂಡಿದೆ. ತೀರ್ಥರು ಐಕ್ಯವಾದ ಸ್ಥಳಗಳನ್ನ ಇಲ್ಲಿ ಕಾಣಬಹುದು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

10 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

13 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

13 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

14 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

16 hours ago