ಮೈಸೂರು : ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿರುವ ರಾಯರ ಮಠದಲ್ಲಿ ಗುರುಪೂರ್ಣಿಮೆ ಸಂಭ್ರಮ ಮನೆಮಾಡಿತ್ತು. ಈ ಮಠಕ್ಕೆ ರಾಘವೇಂದ್ರ ಸ್ವಾಮಿಗಳ ಮೂಲಮಠವೆಂದೂ ಸಹ ಕರೆಯಲಾಗುತ್ತಿದೆ. ಮುಂಜಾನೆಯಿಂದಲೇ ಗುರುಪೂರ್ಣಿಮೆ ಪ್ರಯುಕ್ತ ರಾಘವೇಂದ್ರ ಸ್ವಾಮಿಗಳ ಮೂರ್ತಿಗೆ ವಿಶೇಷವಾದ ಪೂಜೆ ಸಲ್ಲಿಸಲಾಯಿತು.ಅಲ್ಲದೆ ಭಕ್ತರ ದಂಡೇ ಮಠಕ್ಕೆ ಹರಿದು ಬರುತ್ತಿದ್ದು, ರಾಯರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಈ ಮಠಕ್ಕೆ ಮಧ್ವಾಚಾರ್ಯರ ಮೂಲಸ್ಥಾನ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠ ಎಂದು ಹೇಳುತ್ತಾರೆ. ಅಲ್ಲದೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ದೇಶ ಪರ್ಯಟನೆ ಮಾಡುತ್ತಿದ್ದಾಗ ಈ ಮಠಕ್ಕೂ ಭೇಟಿ ನೀಡಿದ್ದರು. ಆದ್ದರಿಂದ ಇಲ್ಲಿ ಮೂಲದೇವರು ಶ್ರೀ ರಾಘವೇಂದ್ರ ಸ್ವಾಮಿಗಳು ಎಂದು ಹೇಳುತ್ತಾರೆ. ಪ್ರತಿನಿತ್ಯವೂ ಕೂಡ ಹೆಚ್ಚಿನ ಭಕ್ತರು ಈ ಮಠಕ್ಕೆ ಭೇಟಿ ನೀಡಿ ಮದುವೆ ಕಾರ್ಯಗಳು, ವಿದ್ಯಾಭ್ಯಾಸ ಸಂಬಂಧಪಟ್ಟಂತೆ , ಕೆಲಸದ ವಿಚಾರ, ಹಣಕಾಸಿನ ವ್ಯವಹಾರಗಳ ಬಗ್ಗೆ ಪೂಜಾ ಕೈಂಕರ್ಯಗಳನ್ನ ಮಾಡಿಸುತ್ತಾರೆ,
ಇನ್ನು ಈ ದೇವಾಲಯದಲ್ಲಿ ರಾಘವೇಂದ್ರಸ್ವಾಮಿಗಳು ಮೂಲ ದೇವರು ಹಾಗೂ ಆಂಜನೇಯ ದೇವರನ್ನ ಇಲ್ಲಿ ಕಾಣಬಹುದು. ಅಲ್ಲದೆ ರಾಯರ ಮಠದಲ್ಲಿ ಪಂಚ ಬೃಂದಾವನ ಒಳಗೊಂಡಿದೆ. ತೀರ್ಥರು ಐಕ್ಯವಾದ ಸ್ಥಳಗಳನ್ನ ಇಲ್ಲಿ ಕಾಣಬಹುದು.
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…