ಮೈಸೂರು

ಸಿಎಂ ಖುರ್ಚಿ ಖಾಲಿ ಇಲ್ಲ : ಸಚಿವ ಮಹದೇವಪ್ಪ

ಮೈಸೂರು: ರಾಜ್ಯದಲ್ಲಿ ಯಾವ ಕುರ್ಚಿ ಖಾಲಿ ಇದೆಯೋ ಗೊತ್ತಿಲ್ಲ. ಸದ್ಯಕ್ಕಿರುವ ಸಿಎಂ ಕುರ್ಚಿ ಖಾಲಿ ಇಲ್ಲ, ಸಿಎಂ ಕುರ್ಚಿ ಭದ್ರವಾಗಿದೆ. ಅದರ ಮೇಲೆ ಕೂತಿರುವ ಸಿದ್ದರಾಮಯ್ಯನವರು ಭದ್ರವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ಬರುವ ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸ್ಥಿರವಾಗಿದೆ. ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿಯವರು ಯಾವಾಗ ತಾನೇ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಾರೆ ಹೇಳಿ. ಅವರು ವಾಮ ಮಾರ್ಗದಿಂದಲೇ ಅಽಕಾರ ಹಿಡಿದಿದ್ದು, ಆಪರೇಷನ್ ಕಮಲದ ಮೂಲಕ ಅನೈತಿಕ ಮೈತ್ರಿ ಮಾಡಿ ಕೊಂಡು ಅಧಿಕಾರಕ್ಕೆ ಬಂದಿದ್ದರು. ನಮ್ಮ ಕಾಂಗ್ರೆಸ್ ಶಾಸಕರ ಮೇಲು ಅಂತಹ ಪ್ರಯತ್ನ ಮಾಡಿದರು. ನಮ್ಮಲ್ಲಿ ೧೩೬ ಸೀಟುಗಳನ್ನು ಗೆದ್ದು ಸ್ಪಷ್ಟ ಬಹುಮತ ಇರುವುದರಿಂದ ಅವರ ಪ್ರಯತ್ನ ಕೈಗೂಡಿಲ್ಲ. ಆದರೂ ಆಪರೇಷನ್ ಕಮಲಕ್ಕೆ ಪ್ರಯತ್ನ ಮಾಡಿದ್ದಾರೆ. ಅದು ನಡೆದಿಲ್ಲ ಅಷ್ಟೇ ಎಂದು ತಿರುಗೇಟು ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

29 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

31 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

34 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

38 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

42 mins ago