hc mahadevappa
ಮೈಸೂರು: ರಾಜ್ಯದಲ್ಲಿ ಯಾವ ಕುರ್ಚಿ ಖಾಲಿ ಇದೆಯೋ ಗೊತ್ತಿಲ್ಲ. ಸದ್ಯಕ್ಕಿರುವ ಸಿಎಂ ಕುರ್ಚಿ ಖಾಲಿ ಇಲ್ಲ, ಸಿಎಂ ಕುರ್ಚಿ ಭದ್ರವಾಗಿದೆ. ಅದರ ಮೇಲೆ ಕೂತಿರುವ ಸಿದ್ದರಾಮಯ್ಯನವರು ಭದ್ರವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಬರುವ ನವೆಂಬರ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸ್ಥಿರವಾಗಿದೆ. ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿಯವರು ಯಾವಾಗ ತಾನೇ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಾರೆ ಹೇಳಿ. ಅವರು ವಾಮ ಮಾರ್ಗದಿಂದಲೇ ಅಽಕಾರ ಹಿಡಿದಿದ್ದು, ಆಪರೇಷನ್ ಕಮಲದ ಮೂಲಕ ಅನೈತಿಕ ಮೈತ್ರಿ ಮಾಡಿ ಕೊಂಡು ಅಧಿಕಾರಕ್ಕೆ ಬಂದಿದ್ದರು. ನಮ್ಮ ಕಾಂಗ್ರೆಸ್ ಶಾಸಕರ ಮೇಲು ಅಂತಹ ಪ್ರಯತ್ನ ಮಾಡಿದರು. ನಮ್ಮಲ್ಲಿ ೧೩೬ ಸೀಟುಗಳನ್ನು ಗೆದ್ದು ಸ್ಪಷ್ಟ ಬಹುಮತ ಇರುವುದರಿಂದ ಅವರ ಪ್ರಯತ್ನ ಕೈಗೂಡಿಲ್ಲ. ಆದರೂ ಆಪರೇಷನ್ ಕಮಲಕ್ಕೆ ಪ್ರಯತ್ನ ಮಾಡಿದ್ದಾರೆ. ಅದು ನಡೆದಿಲ್ಲ ಅಷ್ಟೇ ಎಂದು ತಿರುಗೇಟು ನೀಡಿದರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…