hc mahadevappa
ಮೈಸೂರು: ರಾಜ್ಯದಲ್ಲಿ ಯಾವ ಕುರ್ಚಿ ಖಾಲಿ ಇದೆಯೋ ಗೊತ್ತಿಲ್ಲ. ಸದ್ಯಕ್ಕಿರುವ ಸಿಎಂ ಕುರ್ಚಿ ಖಾಲಿ ಇಲ್ಲ, ಸಿಎಂ ಕುರ್ಚಿ ಭದ್ರವಾಗಿದೆ. ಅದರ ಮೇಲೆ ಕೂತಿರುವ ಸಿದ್ದರಾಮಯ್ಯನವರು ಭದ್ರವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಬರುವ ನವೆಂಬರ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸ್ಥಿರವಾಗಿದೆ. ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿಯವರು ಯಾವಾಗ ತಾನೇ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಾರೆ ಹೇಳಿ. ಅವರು ವಾಮ ಮಾರ್ಗದಿಂದಲೇ ಅಽಕಾರ ಹಿಡಿದಿದ್ದು, ಆಪರೇಷನ್ ಕಮಲದ ಮೂಲಕ ಅನೈತಿಕ ಮೈತ್ರಿ ಮಾಡಿ ಕೊಂಡು ಅಧಿಕಾರಕ್ಕೆ ಬಂದಿದ್ದರು. ನಮ್ಮ ಕಾಂಗ್ರೆಸ್ ಶಾಸಕರ ಮೇಲು ಅಂತಹ ಪ್ರಯತ್ನ ಮಾಡಿದರು. ನಮ್ಮಲ್ಲಿ ೧೩೬ ಸೀಟುಗಳನ್ನು ಗೆದ್ದು ಸ್ಪಷ್ಟ ಬಹುಮತ ಇರುವುದರಿಂದ ಅವರ ಪ್ರಯತ್ನ ಕೈಗೂಡಿಲ್ಲ. ಆದರೂ ಆಪರೇಷನ್ ಕಮಲಕ್ಕೆ ಪ್ರಯತ್ನ ಮಾಡಿದ್ದಾರೆ. ಅದು ನಡೆದಿಲ್ಲ ಅಷ್ಟೇ ಎಂದು ತಿರುಗೇಟು ನೀಡಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…