hc mahadevappa
ಮೈಸೂರು: ರಾಜ್ಯದಲ್ಲಿ ಯಾವ ಕುರ್ಚಿ ಖಾಲಿ ಇದೆಯೋ ಗೊತ್ತಿಲ್ಲ. ಸದ್ಯಕ್ಕಿರುವ ಸಿಎಂ ಕುರ್ಚಿ ಖಾಲಿ ಇಲ್ಲ, ಸಿಎಂ ಕುರ್ಚಿ ಭದ್ರವಾಗಿದೆ. ಅದರ ಮೇಲೆ ಕೂತಿರುವ ಸಿದ್ದರಾಮಯ್ಯನವರು ಭದ್ರವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಬರುವ ನವೆಂಬರ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸ್ಥಿರವಾಗಿದೆ. ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿಯವರು ಯಾವಾಗ ತಾನೇ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಾರೆ ಹೇಳಿ. ಅವರು ವಾಮ ಮಾರ್ಗದಿಂದಲೇ ಅಽಕಾರ ಹಿಡಿದಿದ್ದು, ಆಪರೇಷನ್ ಕಮಲದ ಮೂಲಕ ಅನೈತಿಕ ಮೈತ್ರಿ ಮಾಡಿ ಕೊಂಡು ಅಧಿಕಾರಕ್ಕೆ ಬಂದಿದ್ದರು. ನಮ್ಮ ಕಾಂಗ್ರೆಸ್ ಶಾಸಕರ ಮೇಲು ಅಂತಹ ಪ್ರಯತ್ನ ಮಾಡಿದರು. ನಮ್ಮಲ್ಲಿ ೧೩೬ ಸೀಟುಗಳನ್ನು ಗೆದ್ದು ಸ್ಪಷ್ಟ ಬಹುಮತ ಇರುವುದರಿಂದ ಅವರ ಪ್ರಯತ್ನ ಕೈಗೂಡಿಲ್ಲ. ಆದರೂ ಆಪರೇಷನ್ ಕಮಲಕ್ಕೆ ಪ್ರಯತ್ನ ಮಾಡಿದ್ದಾರೆ. ಅದು ನಡೆದಿಲ್ಲ ಅಷ್ಟೇ ಎಂದು ತಿರುಗೇಟು ನೀಡಿದರು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…