ಮೈಸೂರು

ಟಿ.ನರಸೀಪುರ ಕುಂಭಮೇಳ| ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡಿದ್ದಾರೆ: ಎಚ್‌.ಸಿ.ಮಹದೇವಪ್ಪ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ 13ನೇ ಕುಂಭಮೇಳ ನಡೆಯುತ್ತಿದ್ದು, ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದ ತೀರದಲ್ಲಿ ಇಂದು(ಫೆಬ್ರವರಿ.12) ಕುಂಭಮೇಳದಲ್ಲಿ ಭಾಗವಹಿಸಿದ ವೇಳೆ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ ತಿರುಮಕೂಡಲು ನರಸೀಪುರದಲ್ಲಿ ಕುಂಭಮೇಳ ನಡೆಯುತ್ತಿದೆ. ಹೀಗಾಗಿ ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡುತ್ತಿದ್ದಾರೆ. ಈ ಸ್ಥಳದಲ್ಲಿ ಪ್ರಥಮಬಾರಿಗೆ 1989ರಲ್ಲಿ ಕುಂಭಮೇಳ ನಡೆಯಿತು. ಅಂದಿನಿಂದ ಇಲ್ಲಿಯವರೆಗೂ ಪ್ರತಿ ಮೂರು ವರ್ಷಕ್ಕೊಮ್ಮೆ ಕುಂಭಮೇಳ ನಡೆಯುತ್ತದೆ. ಆದರೆ 2020-21ರ ಕೋವಿಡ್‌ ಸಂದರ್ಭದಲ್ಲಿ ಮಾತ್ರ ಕುಂಭಮೇಳ ನಡೆಯಲಿಲ್ಲ ಎಂದು ಹೇಳಿದರು.

ಈ ಕುಂಭಮೇಳ ಆಚರಣೆಗೆ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿ ಅಗತ್ಯವನ್ನು ನೀಡಿದ್ದು, ಜಿಲ್ಲಾಡಳಿತ ವ್ಯವಸ್ಥಿತವಾಗಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದೆ. ನಮ್ಮ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಹಾಗಾಗಿ ಧಾರ್ಮಿಕ ಸಹಿಷ್ಣುತೆಯನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಧಾರ್ಮಿಕ ಆಚಾರ ವಿಚಾರಗಳ ಆಚರಣೆಗೆ ಮುಕ್ತವಾದ ಅವಕಾಶವನ್ನು ಸಂವಿಧಾನದಲ್ಲಿ ಕಲ್ಪಿಸಲಾಗಿದೆ. ಸಂವಿಧಾನ ಎಲ್ಲರ ಹಕ್ಕುಗಳನ್ನು ರಕ್ಷಣೆ ಮಾಡುತ್ತದೆ. ನಾವು ಭಾರತೀಯರು, ನಾವೆಲ್ಲರೂ ಒಂದೇ ನಮ್ಮಲ್ಲಿ ಮೇಲು ಕೀಳು ಭಾವನೆ ಇಲ್ಲ ಎಂಬ ಭಾವನೆಯನ್ನು ಪ್ರತಿಯೊಬ್ಬರೂ ಬೆಳಸಿಕೊಳ್ಳಬೇಕು ಎಂದರು.

ಇನ್ನೂ ನದಿಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದ್ದು, ತಮ್ಮ ಚರಂಡಿ ಮತ್ತು ನಿವಾಸದ ತ್ಯಾಜ್ಯದ ನೀರನ್ನು ನದಿ ಕಾಲುವೆಗಳಿಗೆ ಹರಿಯಲು ಬಿಡಬಾರದು. ನದಿಗಳ ನೀರು ನಮ್ಮ ದೇಶದ ಸಂಪತ್ತಾಗಿದೆ. ಅದನ್ನು ಉಳಿಸಿ ಬೆಳಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

21 mins ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

26 mins ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

1 hour ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

2 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

3 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

4 hours ago