ಮೈಸೂರು

ಟಿ.ನರಸೀಪುರ ಕುಂಭಮೇಳ| ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡಿದ್ದಾರೆ: ಎಚ್‌.ಸಿ.ಮಹದೇವಪ್ಪ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ 13ನೇ ಕುಂಭಮೇಳ ನಡೆಯುತ್ತಿದ್ದು, ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದ ತೀರದಲ್ಲಿ ಇಂದು(ಫೆಬ್ರವರಿ.12) ಕುಂಭಮೇಳದಲ್ಲಿ ಭಾಗವಹಿಸಿದ ವೇಳೆ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ ತಿರುಮಕೂಡಲು ನರಸೀಪುರದಲ್ಲಿ ಕುಂಭಮೇಳ ನಡೆಯುತ್ತಿದೆ. ಹೀಗಾಗಿ ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡುತ್ತಿದ್ದಾರೆ. ಈ ಸ್ಥಳದಲ್ಲಿ ಪ್ರಥಮಬಾರಿಗೆ 1989ರಲ್ಲಿ ಕುಂಭಮೇಳ ನಡೆಯಿತು. ಅಂದಿನಿಂದ ಇಲ್ಲಿಯವರೆಗೂ ಪ್ರತಿ ಮೂರು ವರ್ಷಕ್ಕೊಮ್ಮೆ ಕುಂಭಮೇಳ ನಡೆಯುತ್ತದೆ. ಆದರೆ 2020-21ರ ಕೋವಿಡ್‌ ಸಂದರ್ಭದಲ್ಲಿ ಮಾತ್ರ ಕುಂಭಮೇಳ ನಡೆಯಲಿಲ್ಲ ಎಂದು ಹೇಳಿದರು.

ಈ ಕುಂಭಮೇಳ ಆಚರಣೆಗೆ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿ ಅಗತ್ಯವನ್ನು ನೀಡಿದ್ದು, ಜಿಲ್ಲಾಡಳಿತ ವ್ಯವಸ್ಥಿತವಾಗಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದೆ. ನಮ್ಮ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಹಾಗಾಗಿ ಧಾರ್ಮಿಕ ಸಹಿಷ್ಣುತೆಯನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಧಾರ್ಮಿಕ ಆಚಾರ ವಿಚಾರಗಳ ಆಚರಣೆಗೆ ಮುಕ್ತವಾದ ಅವಕಾಶವನ್ನು ಸಂವಿಧಾನದಲ್ಲಿ ಕಲ್ಪಿಸಲಾಗಿದೆ. ಸಂವಿಧಾನ ಎಲ್ಲರ ಹಕ್ಕುಗಳನ್ನು ರಕ್ಷಣೆ ಮಾಡುತ್ತದೆ. ನಾವು ಭಾರತೀಯರು, ನಾವೆಲ್ಲರೂ ಒಂದೇ ನಮ್ಮಲ್ಲಿ ಮೇಲು ಕೀಳು ಭಾವನೆ ಇಲ್ಲ ಎಂಬ ಭಾವನೆಯನ್ನು ಪ್ರತಿಯೊಬ್ಬರೂ ಬೆಳಸಿಕೊಳ್ಳಬೇಕು ಎಂದರು.

ಇನ್ನೂ ನದಿಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದ್ದು, ತಮ್ಮ ಚರಂಡಿ ಮತ್ತು ನಿವಾಸದ ತ್ಯಾಜ್ಯದ ನೀರನ್ನು ನದಿ ಕಾಲುವೆಗಳಿಗೆ ಹರಿಯಲು ಬಿಡಬಾರದು. ನದಿಗಳ ನೀರು ನಮ್ಮ ದೇಶದ ಸಂಪತ್ತಾಗಿದೆ. ಅದನ್ನು ಉಳಿಸಿ ಬೆಳಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago