accident (1)
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಹೆರಿಗೆ ಗ್ರಾಮದ ಹಿರಿಯ ಮುಖಂಡ ವರಸಿಂಗೇಗೌಡ (70) ಸಾವಿಗೀಡಾದವರು.
ಭಾನುವಾರ ಮಧ್ಯಾಹ್ನ ವರಸಿಂಗೇಗೌಡ ಹೈರಿಗೆಯ ತಮ್ಮ ಮನೆಯಿಂದ ಬೈಕ್ ಮೂಲಕ ಮಾದಾಪುರ ಗ್ರಾಮಕ್ಕೆ ಹೋಗುತ್ತಿದ್ದಾಗ ಹೈರಿಗೆ ಗ್ರಾಮದ ನಿವಾಸಿಗಳಾದ ವೇಣು ದಂಪತಿ ತಮ್ಮ ಬೈಕಿನಲ್ಲಿ ಮಾದಾಪುರದಿಂದ ಹೈರಿಗೆ ಗ್ರಾಮಕ್ಕೆ ಬರುತ್ತಿದ್ದಾಗ ಪೆಟ್ರೋಲ್ ಬಂಕ್ ಬಳಿ ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ವರಸಿಂಗೇಗೌಡರ ತಲೆ ಮತ್ತು ಕಾಲಿಗೆ ತೀವ್ರ ಪೆಟ್ಟಾಗಿದ್ದು, ಅವರನ್ನು ಕೂಡಲೇ ಗ್ರಾಮಸ್ಥರು, ಸಂಬಂಧಿಕರು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಮೃತರಿಗೆ ಪತ್ನಿ ಜವರಮ್ಮ, ಪುತ್ರರಾದ ಶ್ರೀಧರ್, ಅನಿಲ್, ಪುತ್ರಿ ಅನುಪಮಾ ಇದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಗ್ರಾಮದ ತೋಟದಲ್ಲಿ ನೆರವೇರಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…