Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಎಚ್‌.ಡಿ ಕೋಟೆ | ಸಾಲ ಭಾದೆ : ಯುವ ರೈತ ಆತ್ಮಹತ್ಯೆ

ಹೆಚ್.ಡಿ.ಕೋಟೆ : ತಾಲ್ಲೂಕಿನ ಗಡಿ ಭಾಗದ ಗಂಡತ್ತೂರು ಗ್ರಾಮದಲ್ಲಿ ಸಾಲ ಬಾಧೆಯಿಂದ ಯುವ ರೈತ ವೆಂಕಟೇಶ್ (33) ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎರಡು ಎಕರೆ ಜಮೀನಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ಬೆಳೆಯಲು 4 ಲಕ್ಷ ರೂ. ಸಾಲ ಮಾಡಿದ್ದ ಇವರು, ಬೆಳೆಗಳು ಸಮರ್ಪಕವಾಗಿ ಬಾರದಿದ್ದರಿಂದ ಸಾಲ ತೀರಿಸಲು ಹೆದರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:-ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್‌ ಸಮಸ್ಯೆಗೆ ಶೀಘ್ರ ತೆರೆ : ಇಂಧನ ಸಚಿವ ಜಾರ್ಜ್‌

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆರವೇರಿತು. ಈ ಸಂಬಂಧ ಪ್ರಕರಣ ದಾಖಲಾಗಿದೆ.

Tags:
error: Content is protected !!