ಎಚ್.ಡಿ.ಕೋಟೆ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಜಕ್ಕಹಳ್ಳಿ ದೇವಲಾಪುರ ಗ್ರಾಮದ ಗೀತಾ ಎಂಬುವವರೇ ಮೃತಪಟ್ಟ ಗರ್ಭಿಣಿಯಾಗಿದ್ದು, ಮೃತದೇಹದ ಮುಂದೆ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.
ಮೃತದೇಹ ನೀಡಲು ಆಸ್ಪತ್ರೆ ಸಿಬ್ಬಂದಿ ವಿಳಂಬ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದು, ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಬೆಳಿಗ್ಗೆ ಹೆರಿಗೆ ನೋವಿನಿಂದ ಗೀತಾ ಆಸ್ಪತ್ರೆಗೆ ದಾಖಲಾಗಿದ್ದರು. ದಾಖಲಾದ ಕೆಲವೇ ಹೊತ್ತಿಗೆ ಗೀತಾ ಸಾವನ್ನಪ್ಪಿದ್ದಾರೆ. ಪೋಷಕರ ವಿರೋಧದ ನಡುವೆಯೂ ಮರಣೋತ್ತರ ಪರೀಕ್ಷೆಗೆ ವೈದ್ಯರು ಮುಂದಾಗಿದ್ದು, ಮಧ್ಯಾಹ್ನ ಕಳೆದರೂ ಮೃತದೇಹವನ್ನು ವಾರಸುದಾರರಿಗೆ ನೀಡದೇ ವಿಳಂಬ ಮಾಡಿದ್ದಾರೆ.
ಕೊನೆಗೆ ತಹಶೀಲ್ದಾರ್ ಶ್ರೀನಿವಾಸ್ ಸ್ಥಳಕ್ಕಾಗಮಿಸಿ, ಮರಣೋತ್ತರ ಪರೀಕ್ಷೆ ಮೈಸೂರಿನಲ್ಲಿ ನಡೆಸಲು ನಿರ್ಧರಿಸಿದರು. ಆದರೆ ಎಚ್.ಡಿ.ಕೋಟೆಯಲ್ಲೇ ಮರಣೋತ್ತರ ಪರೀಕ್ಷೆ ನೆರವೇರಿಸಿ ಮೈಸೂರಿಗೆ ಮೃತದೇಹ ಹೊಯ್ಯಲು ಬಿಡಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದರು.
ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಎಲ್ಲರನ್ನು ಸಮಾಧಾನ ಪಡಿಸಿ ಎಚ್.ಡಿ.ಕೋಟೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದರು. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…