ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಸೆಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೆಂಟ್ ಮೇರಿಸ್ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಡಾ.ಜ್ಯೋತಿ ಅವರು, ಪೋಷಕರು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಬಗ್ಗೆ ಗಮನ ಹರಿಸಬೇಕು. ಹಾಗೆಯೇ ಶೈಕ್ಷಣಿಕ ಬೆಳವಣಿಗೆಯ ಬಗ್ಗೆ ಶಿಕ್ಷಕರು ಕ್ರಮ ವಹಿಸುತ್ತಾರೆ. ಯಾಕೆಂದರೆ ನಾನು ಇತ್ತೀಚೆಗೆ ನಮ್ಮ ಆಸ್ಪತ್ರೆಯಲ್ಲಿ ಸಾಕಷ್ಟು ಮಕ್ಕಳನ್ನು ಗಮನಿಸುತ್ತಿದ್ದೇನೆ. ತುಂಬಾ ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಬಳಲುತ್ತಿವೆ. ಇದಕ್ಕೆ ಮುಖ್ಯ ಕಾರಣ ನಾವು ದಿನನಿತ್ಯ ತಿನ್ನುವ ಆಹಾರ. ಈ ಆಹಾರ ಪದ್ದತಿಯನ್ನು ನಾವು ಸಮತೋಲನದ ಕ್ರಮದಲ್ಲಿ ಬದಲಾಯಿಸದಿದ್ದರೇ ಮಕ್ಕಳಿಗೆ ಅರೋಗ್ಯದಲ್ಲಿ ಏರುಪೇರು ಆಗುತ್ತಿದೆ. ಆದ್ದರಿಂದ ಪೋಷಕರು ಈ ವಿಷಯಗಳ ಮೇಲೆ ಕಾಳಜಿ ವಹಿಸಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಸುಮಾರು 300ಕ್ಕೂ ಹೆಚ್ಚು ಎಲ್ಕೆಜಿ, ಯುಕೆಜಿ ಮತ್ತು ಒಂದನೇ ತರಗತಿ ಮಕ್ಕಳು ತಮ್ಮ ತಮ್ಮ ತಾಯಂದಿರಿಂದ ತಟ್ಟೆಯಲ್ಲಿ ಅಕ್ಕಿ ತುಂಬಿಸಿ ಅದರಲ್ಲಿ ಅರಿಶಿನ ಕೊನೆಯಿಂದ ಅಮ್ಮ ಎಂದು ಬರೆಯುವ ಮೂಲಕ ಅಕ್ಷರಾಭ್ಯಾಸ ಮಾಡಿದರು.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…