ಮೈಸೂರು

ಎಚ್.ಡಿ.ಕೋಟೆಯ ಸೆಂಟ್‌ ಜೋಸೆಫ್‌ ಸೆಂಟ್ರಲ್‌ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಸೆಂಟ್‌ ಜೋಸೆಫ್‌ ಸೆಂಟ್ರಲ್‌ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೆಂಟ್‌ ಮೇರಿಸ್‌ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಡಾ.ಜ್ಯೋತಿ ಅವರು, ಪೋಷಕರು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಬಗ್ಗೆ ಗಮನ ಹರಿಸಬೇಕು. ಹಾಗೆಯೇ ಶೈಕ್ಷಣಿಕ ಬೆಳವಣಿಗೆಯ ಬಗ್ಗೆ ಶಿಕ್ಷಕರು ಕ್ರಮ ವಹಿಸುತ್ತಾರೆ. ಯಾಕೆಂದರೆ ನಾನು ಇತ್ತೀಚೆಗೆ ನಮ್ಮ ಆಸ್ಪತ್ರೆಯಲ್ಲಿ ಸಾಕಷ್ಟು ಮಕ್ಕಳನ್ನು ಗಮನಿಸುತ್ತಿದ್ದೇನೆ. ತುಂಬಾ ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಬಳಲುತ್ತಿವೆ. ಇದಕ್ಕೆ ಮುಖ್ಯ ಕಾರಣ ನಾವು ದಿನನಿತ್ಯ ತಿನ್ನುವ ಆಹಾರ. ಈ ಆಹಾರ ಪದ್ದತಿಯನ್ನು ನಾವು ಸಮತೋಲನದ ಕ್ರಮದಲ್ಲಿ ಬದಲಾಯಿಸದಿದ್ದರೇ ಮಕ್ಕಳಿಗೆ ಅರೋಗ್ಯದಲ್ಲಿ ಏರುಪೇರು ಆಗುತ್ತಿದೆ. ಆದ್ದರಿಂದ ಪೋಷಕರು ಈ ವಿಷಯಗಳ ಮೇಲೆ ಕಾಳಜಿ ವಹಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಸುಮಾರು 300ಕ್ಕೂ ಹೆಚ್ಚು ಎಲ್‌ಕೆಜಿ, ಯುಕೆಜಿ ಮತ್ತು ಒಂದನೇ ತರಗತಿ ಮಕ್ಕಳು ತಮ್ಮ ತಮ್ಮ ತಾಯಂದಿರಿಂದ ತಟ್ಟೆಯಲ್ಲಿ ಅಕ್ಕಿ ತುಂಬಿಸಿ ಅದರಲ್ಲಿ ಅರಿಶಿನ ಕೊನೆಯಿಂದ ಅಮ್ಮ ಎಂದು ಬರೆಯುವ ಮೂಲಕ ಅಕ್ಷರಾಭ್ಯಾಸ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

4 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

7 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

7 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

8 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

11 hours ago