ಮೈಸೂರು

ಎಚ್.ಡಿ ಕೋಟೆ : ಹಲವು ದೇವಾಲಯಗಳಲ್ಲಿ ಸರಣಿ ಕಳ್ಳತನ

ಎಚ್.ಡಿ.ಕೋಟೆ : ಪಟ್ಟಣ ವ್ಯಾಪ್ತಿಯಲ್ಲಿರುವ ಹಲವು ಪ್ರಮುಖ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆದು ಹುಂಡಿಯಲ್ಲಿದ್ದ ಲಕ್ಷಾಂತರ ರೂ.ಗಳನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ.

ಕಾಳಿದಾಸ ರಸ್ತೆಯಲ್ಲಿರುವ ಶತಮಾನಗಳ ಇತಿಹಾಸ ಹೊಂದಿರುವ ಶ್ರೀ ಶನೈಶ್ಚರ ದೇವಾಲಯದಲ್ಲಿ ಮತ್ತು ಮೇಟಿಕುಪ್ಪೆ ಮುಖ್ಯರಸ್ತೆಯ ಹನುಮಂತ ನಗರದಲ್ಲಿರುವ ಆಂಜನೇಯಸ್ವಾಮಿ ದೇವಾಲಯ, ಕೃಷ್ಣಾಪುರ ಗ್ರಾಮದ ಪೌರಕಾರ್ಮಿಕರ ಕಾಲೋನಿಯಲ್ಲಿರುವ ಪಟ್ಟಲದಮ್ಮ ದೇವಸ್ಥಾನಗಳಲ್ಲಿ ಕಳ್ಳರು ಶುಕ್ರವಾರ ರಾತ್ರಿ ಬಾಗಿಲು ಮುರಿದು ದೇವಸ್ಥಾನದಲ್ಲಿದ್ದ ಹುಂಡಿಯನ್ನು ಒಡೆದು ಹಣ ಮತ್ತು ಚಿನ್ನಾಭರಣಗಳನ್ನು ದೋಚಿದ್ದಾರೆ.

ಇತ್ತೀಚೆಗೆ ಈ ದೇಗುಲಗಳಲ್ಲಿ ಅನೇಕ ವಿಶೇಷ ಕಾರ್ಯಕ್ರಮಗಳು ನಡೆದಿದ್ದವು. ಇದರಿಂದ ಭಕ್ತಾದಿಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಹಣವನ್ನು ಹುಂಡಿಯಲ್ಲಿ ಹಾಕಿದ್ದರು. ಇದನ್ನು ಗಮನಿಸಿಕೊಂಡಿದ್ದ ಕಳ್ಳರ ಗುಂಪು ಕಳ್ಳತನದ ಕೃತ್ಯ ಎಸಗಿದೆ.

ಪುರಸಭೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಅಂಗಡಿಗಳ ಬೀಗ ಒಡೆದು ಕಳ್ಳತನ ನಡೆಸುತ್ತಿದ್ದ ಕಳ್ಳರು ಈಗ ದೇವಾಲಯಗಳಿಗೆ ಕನ್ನ ಹಾಕುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಸರಣಿ ಕಳ್ಳತನದ ದೇವಸ್ಥಾನಗಳಿಗೆ ಪಟ್ಟಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

7 hours ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

7 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

7 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

8 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

9 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

9 hours ago