ಎಚ್.ಡಿ.ಕೋಟೆ: ಕೆರೆಯಲ್ಲಿ ಎತ್ತುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವಿಗೀಡಾಗಿರುವ ಘಟನೆ ನಡೆದಿದೆ.
ತಾಲ್ಲೂಕಿನ ಎಲೆಹುಂಡಿ ಸಮೀಪದ ಚಿಕ್ಕಾಳೆ ಗೌಡನಪುರದ ಗ್ರಾಮದ ಚಂದ್ರು ಅವರ ಮಗ, ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಹರೀಶ್ ಸಾವಿಗೀಡಾದ ವಿದ್ಯಾರ್ಥಿ.
ಮಂಗಳವಾರ ಮಧ್ಯಾಹ್ನ ಗ್ರಾಮದಲ್ಲಿರುವ ಕೆರೆಯಲ್ಲಿ ತಮ್ಮ ಎತ್ತುಗಳಿಗೆ ನೀರು ಕುಡಿಸಲೆಂದು ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಯಲ್ಲಿ ಮುಳುಗಿದ್ದಾರೆ. ಎತ್ತುಗಳು ಮಾತ್ರ ಮನೆಗೆ ವಾಪಸ್ ಬಂದ ಹಿನ್ನೆಲೆಯಲ್ಲಿ ತಂದೆ ಮತ್ತು ಪೋಷಕರು ಅನೇಕ ಕಡೆ ಹುಡುಕಿ, ಕೊನೆಗೆ ಕೆರೆಯಲ್ಲಿ ನೋಡಿದಾಗ ಹರೀಶ್ ಮುಳುಗಿರುವುದು ಗೊತ್ತಾಗಿ, ಅಗ್ನಿಶಾಮಕ ದಳದವರಿಗೆ ವಿಚಾರ ತಿಳಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ರೋದನ ಮುಗಿಲು ಮುಟ್ಟಿತ್ತು.
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್ಗಳು ಈಗ ಜನರಿಲ್ಲದೇ…
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…