ಎಚ್.ಡಿ.ಕೋಟೆ: ಕೆರೆಯಲ್ಲಿ ಎತ್ತುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವಿಗೀಡಾಗಿರುವ ಘಟನೆ ನಡೆದಿದೆ.
ತಾಲ್ಲೂಕಿನ ಎಲೆಹುಂಡಿ ಸಮೀಪದ ಚಿಕ್ಕಾಳೆ ಗೌಡನಪುರದ ಗ್ರಾಮದ ಚಂದ್ರು ಅವರ ಮಗ, ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಹರೀಶ್ ಸಾವಿಗೀಡಾದ ವಿದ್ಯಾರ್ಥಿ.
ಮಂಗಳವಾರ ಮಧ್ಯಾಹ್ನ ಗ್ರಾಮದಲ್ಲಿರುವ ಕೆರೆಯಲ್ಲಿ ತಮ್ಮ ಎತ್ತುಗಳಿಗೆ ನೀರು ಕುಡಿಸಲೆಂದು ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಯಲ್ಲಿ ಮುಳುಗಿದ್ದಾರೆ. ಎತ್ತುಗಳು ಮಾತ್ರ ಮನೆಗೆ ವಾಪಸ್ ಬಂದ ಹಿನ್ನೆಲೆಯಲ್ಲಿ ತಂದೆ ಮತ್ತು ಪೋಷಕರು ಅನೇಕ ಕಡೆ ಹುಡುಕಿ, ಕೊನೆಗೆ ಕೆರೆಯಲ್ಲಿ ನೋಡಿದಾಗ ಹರೀಶ್ ಮುಳುಗಿರುವುದು ಗೊತ್ತಾಗಿ, ಅಗ್ನಿಶಾಮಕ ದಳದವರಿಗೆ ವಿಚಾರ ತಿಳಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ರೋದನ ಮುಗಿಲು ಮುಟ್ಟಿತ್ತು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…