ಎಚ್.ಡಿ.ಕೋಟೆ: ಕೆರೆಯಲ್ಲಿ ಎತ್ತುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವಿಗೀಡಾಗಿರುವ ಘಟನೆ ನಡೆದಿದೆ.
ತಾಲ್ಲೂಕಿನ ಎಲೆಹುಂಡಿ ಸಮೀಪದ ಚಿಕ್ಕಾಳೆ ಗೌಡನಪುರದ ಗ್ರಾಮದ ಚಂದ್ರು ಅವರ ಮಗ, ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಹರೀಶ್ ಸಾವಿಗೀಡಾದ ವಿದ್ಯಾರ್ಥಿ.
ಮಂಗಳವಾರ ಮಧ್ಯಾಹ್ನ ಗ್ರಾಮದಲ್ಲಿರುವ ಕೆರೆಯಲ್ಲಿ ತಮ್ಮ ಎತ್ತುಗಳಿಗೆ ನೀರು ಕುಡಿಸಲೆಂದು ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಯಲ್ಲಿ ಮುಳುಗಿದ್ದಾರೆ. ಎತ್ತುಗಳು ಮಾತ್ರ ಮನೆಗೆ ವಾಪಸ್ ಬಂದ ಹಿನ್ನೆಲೆಯಲ್ಲಿ ತಂದೆ ಮತ್ತು ಪೋಷಕರು ಅನೇಕ ಕಡೆ ಹುಡುಕಿ, ಕೊನೆಗೆ ಕೆರೆಯಲ್ಲಿ ನೋಡಿದಾಗ ಹರೀಶ್ ಮುಳುಗಿರುವುದು ಗೊತ್ತಾಗಿ, ಅಗ್ನಿಶಾಮಕ ದಳದವರಿಗೆ ವಿಚಾರ ತಿಳಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ರೋದನ ಮುಗಿಲು ಮುಟ್ಟಿತ್ತು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…