ಎಚ್.ಡಿ.ಕೋಟೆ : ಪಟ್ಟಣದ ಆದರ್ಶ ವಿದ್ಯಾಲಯದ ಹಿರೇಹಳ್ಳಿ ಗ್ರಾಮದ ವಿದ್ಯಾರ್ಥಿ ಯಶಿಕ್ ಶಿವನ್ ಅವರು ಟೆಲಿಸ್ಕೋಪ್ ಮೇಕಿಂಗ್ನಲ್ಲಿ ವಿಶ್ವ ದಾಖಲೆ ಮತ್ತು ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಇದನ್ನು ಓದಿ: ದಸರಾ; ನೈಋತ್ಯ ರೈಲ್ವೆಗೆ ದಾಖಲೆ ಆದಾಯ
ದೊಡ್ಡಬಳ್ಳಾಪುರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ನ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವದಾಖಲೆಯ ರಾಜ್ಯಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿ ಶಿಬಿರದಲ್ಲಿ ನಾನು ವಿಜ್ಞಾನಿ-2025 ಎಂಬ ಕಾರ್ಯಕ್ರಮದಲ್ಲಿ ರಾಜ್ಯದಿಂದ 152 ಮಕ್ಕಳು 9 ದಿನಗಳ ಕಾಲ ನಡೆದ ಶಿಬಿರದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನ ಹಿರೇಹಳ್ಳಿ ಗ್ರಾಮದ ಶ್ವೇತಶ್ರೀ ಮತ್ತು ಮಹದೇವಸ್ವಾಮಿ ಎಂಬವರ ಪುತ್ರ, ಆದರ್ಶ ವಿದ್ಯಾಲಯದ ಏಳನೇ ತರಗತಿ ವಿದ್ಯಾರ್ಥಿ ಯಶಿಕ್ ಶಿವನ್ ಭಾಗವಹಿಸಿ ವಿಶ್ವ ದಾಖಲೆ ಮಾಡಿದ್ದಾರೆ. ಸಂಸ್ಥಾಪಕ ಅಧ್ಯಕ್ಷರಾದ ಡಾ.ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಇಸ್ರೋದ ಮಾಜಿ ಅಧ್ಯಕ್ಷರಾದ ಡಾ.ಕಿರಣ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ವಿಜ್ಞಾನಿಗಳಾದ ಸತೀಶ್ ಆರ್ಯಭಟ ಮತ್ತು ಲಕ್ಷ್ಮಿಪತಿ ಅವರಿಂದ ತರಬೇತಿ ಪಡೆದು ವರ್ಲ್ಡ್ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್, ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡುವ ಮೂಲಕ ಕೀರ್ತಿ ತಂದಿದ್ದಾರೆ ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…