ಮೈಸೂರು

ಎಚ್.ಡಿ.ಕೋಟೆ ತಾಲ್ಲೂಕಿನ ಆನೆಮಾಳಕ್ಕೆ ದಿಢೀರ್‌ ಭೇಟಿ ನೀಡಿದ ಆಹಾರ ಸುರಕ್ಷತಾ ಅಧಿಕಾರಿ ಟಿ.ರವಿಕುಮಾರ್‌

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಕೇರಳ ಗಡಿ ಭಾಗವಾದ ಆನೆ ಮಾಳ ಗ್ರಾಮಕ್ಕೆ ದಿಢೀರ್‌ ಭೇಟಿ ನೀಡಿದ ಆಹಾರ ಸುರಕ್ಷತಾ ಅಧಿಕಾರಿ ಟಿ.ರವಿಕುಮಾರ್‌ ಅವರು, ಲೈಸೆನ್ಸ್‌ ಇಲ್ಲದ ಹೋಟೆಲ್‌ ಹಾಗೂ ಬೇಕರಿಗಳಿಗೆ ನೋಟಿಸ್‌ ನೀಡಿದ್ದಾರೆ.

ಈ ವೇಳೆ ಬೇಕರಿ ಮಾಲೀಕರಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಅವರು, ಮಾಲೀಕರು ಹಾಗೂ ವ್ಯಾಪಾರಸ್ಥರು ಗ್ರಾಹಕರಿಗೆ ಉತ್ತಮವಾದ ಮತ್ತು ಶುದ್ಧವಾದ ಒಳ್ಳೆಯ ಗುಣಮಟ್ಟದ ಆಹಾರವನ್ನು ನೀಡಬೇಕು.

ಯಾವುದೇ ಕಾರಣಕ್ಕೂ ನಿನ್ನೆ-ಮೊನ್ನೆ ಉಳಿದಿರುವ ಆಹಾರ, ಚಿಕನ್‌, ಮಟನ್‌, ಫಿಶ್‌ಗಳನ್ನು ನೀಡಬಾರದು.

ಚಿಕನ್‌, ಮಟನ್‌ ಹಾಗೂ ಫಿಶ್‌ನ್ನು ಕಟ್‌ ಮಾಡಿದ ನಂತರ ಪ್ಲಾಸ್ಟಿಕ್‌ ಕವರ್‌ನಿಂದ ಮುಚ್ಚಿಡಬೇಕು. ಯಾವುದೇ ಕಾರಣಕ್ಕೂ ನೊಣ ಹಾಗೂ ಇನ್ನಿತರ ಕೀಟಗಳು ಕೂರದ ಹಾಗೆ ನೋಡಿಕೊಳ್ಳಬೇಕು. ಹೋಟೆಲ್‌ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಎಂದು ಸಲಹೆ ನೀಡಿದರು.

ಇನ್ನೂ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಎಲ್ಲಾ ಹೋಟೆಲ್‌ ಮತ್ತು ಬೇಕರಿ ಮಾಲೀಕರು ಮತ್ತು ವ್ಯಾಪಾರಸ್ಥರು ಒಂದು ವಾರದ ಒಳಗೆ ಕಡ್ಡಾಯವಾಗಿ ಆಹಾರ ಪರವಾನಗಿ ಲೈಸೆನ್ಸ್‌ ಪಡೆಯಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ ರವಿರಾಜ್‌, ಸಿದ್ದರಾಜು ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago