ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಕೇರಳ ಗಡಿ ಭಾಗವಾದ ಆನೆ ಮಾಳ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಆಹಾರ ಸುರಕ್ಷತಾ ಅಧಿಕಾರಿ ಟಿ.ರವಿಕುಮಾರ್ ಅವರು, ಲೈಸೆನ್ಸ್ ಇಲ್ಲದ ಹೋಟೆಲ್ ಹಾಗೂ ಬೇಕರಿಗಳಿಗೆ ನೋಟಿಸ್ ನೀಡಿದ್ದಾರೆ.
ಈ ವೇಳೆ ಬೇಕರಿ ಮಾಲೀಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ಅವರು, ಮಾಲೀಕರು ಹಾಗೂ ವ್ಯಾಪಾರಸ್ಥರು ಗ್ರಾಹಕರಿಗೆ ಉತ್ತಮವಾದ ಮತ್ತು ಶುದ್ಧವಾದ ಒಳ್ಳೆಯ ಗುಣಮಟ್ಟದ ಆಹಾರವನ್ನು ನೀಡಬೇಕು.
ಯಾವುದೇ ಕಾರಣಕ್ಕೂ ನಿನ್ನೆ-ಮೊನ್ನೆ ಉಳಿದಿರುವ ಆಹಾರ, ಚಿಕನ್, ಮಟನ್, ಫಿಶ್ಗಳನ್ನು ನೀಡಬಾರದು.
ಚಿಕನ್, ಮಟನ್ ಹಾಗೂ ಫಿಶ್ನ್ನು ಕಟ್ ಮಾಡಿದ ನಂತರ ಪ್ಲಾಸ್ಟಿಕ್ ಕವರ್ನಿಂದ ಮುಚ್ಚಿಡಬೇಕು. ಯಾವುದೇ ಕಾರಣಕ್ಕೂ ನೊಣ ಹಾಗೂ ಇನ್ನಿತರ ಕೀಟಗಳು ಕೂರದ ಹಾಗೆ ನೋಡಿಕೊಳ್ಳಬೇಕು. ಹೋಟೆಲ್ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಎಂದು ಸಲಹೆ ನೀಡಿದರು.
ಇನ್ನೂ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಎಲ್ಲಾ ಹೋಟೆಲ್ ಮತ್ತು ಬೇಕರಿ ಮಾಲೀಕರು ಮತ್ತು ವ್ಯಾಪಾರಸ್ಥರು ಒಂದು ವಾರದ ಒಳಗೆ ಕಡ್ಡಾಯವಾಗಿ ಆಹಾರ ಪರವಾನಗಿ ಲೈಸೆನ್ಸ್ ಪಡೆಯಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ ರವಿರಾಜ್, ಸಿದ್ದರಾಜು ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…