ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಕೇರಳ ಗಡಿ ಭಾಗವಾದ ಆನೆ ಮಾಳ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಆಹಾರ ಸುರಕ್ಷತಾ ಅಧಿಕಾರಿ ಟಿ.ರವಿಕುಮಾರ್ ಅವರು, ಲೈಸೆನ್ಸ್ ಇಲ್ಲದ ಹೋಟೆಲ್ ಹಾಗೂ ಬೇಕರಿಗಳಿಗೆ ನೋಟಿಸ್ ನೀಡಿದ್ದಾರೆ.
ಈ ವೇಳೆ ಬೇಕರಿ ಮಾಲೀಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ಅವರು, ಮಾಲೀಕರು ಹಾಗೂ ವ್ಯಾಪಾರಸ್ಥರು ಗ್ರಾಹಕರಿಗೆ ಉತ್ತಮವಾದ ಮತ್ತು ಶುದ್ಧವಾದ ಒಳ್ಳೆಯ ಗುಣಮಟ್ಟದ ಆಹಾರವನ್ನು ನೀಡಬೇಕು.
ಯಾವುದೇ ಕಾರಣಕ್ಕೂ ನಿನ್ನೆ-ಮೊನ್ನೆ ಉಳಿದಿರುವ ಆಹಾರ, ಚಿಕನ್, ಮಟನ್, ಫಿಶ್ಗಳನ್ನು ನೀಡಬಾರದು.
ಚಿಕನ್, ಮಟನ್ ಹಾಗೂ ಫಿಶ್ನ್ನು ಕಟ್ ಮಾಡಿದ ನಂತರ ಪ್ಲಾಸ್ಟಿಕ್ ಕವರ್ನಿಂದ ಮುಚ್ಚಿಡಬೇಕು. ಯಾವುದೇ ಕಾರಣಕ್ಕೂ ನೊಣ ಹಾಗೂ ಇನ್ನಿತರ ಕೀಟಗಳು ಕೂರದ ಹಾಗೆ ನೋಡಿಕೊಳ್ಳಬೇಕು. ಹೋಟೆಲ್ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಎಂದು ಸಲಹೆ ನೀಡಿದರು.
ಇನ್ನೂ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಎಲ್ಲಾ ಹೋಟೆಲ್ ಮತ್ತು ಬೇಕರಿ ಮಾಲೀಕರು ಮತ್ತು ವ್ಯಾಪಾರಸ್ಥರು ಒಂದು ವಾರದ ಒಳಗೆ ಕಡ್ಡಾಯವಾಗಿ ಆಹಾರ ಪರವಾನಗಿ ಲೈಸೆನ್ಸ್ ಪಡೆಯಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಾದ ರವಿರಾಜ್, ಸಿದ್ದರಾಜು ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…