ಮೈಸೂರು

ಕಾಂಗ್ರೆಸ್‌ ಸರ್ಕಾರ, ರಾಜ್ಯಕ್ಕಿದ್ದ ಹೆಸರನ್ನು ಸರ್ವನಾಶ ಮಾಡಲು ಹೊರಟಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

ಮೈಸೂರು: ಕಾಂಗ್ರೆಸ್‌ ಸರ್ಕಾರ ಉತ್ತಮವಾಗಿ ಸರ್ಕಾರ ನಡೆಸಿ, ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡು ರಾಜ್ಯಕ್ಕಿದ್ದ ಹೆಸರನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ.24) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ಒಳ್ಳೆಯ ಕೆಲಸಗಳನ್ನು ಮಾಡಲೆಂದು ಕಾಂಗ್ರೆಸ್‌ ಸರ್ಕಾರಕ್ಕೆ ಆರ್ಶೀವಾದಿಸಿದರು. ಆದರೆ ಈ ಸರ್ಕಾರದವರು ಮಾಡುತ್ತಿರುವುದೇನು? ಸರ್ಕಾರದ ಆಡಳಿತ ವಿಷಯದಲ್ಲಿ ರಾಜ್ಯಕ್ಕೆ ಇದ್ದ ಹೆಸರನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಅವರು ಪಕ್ಷದಲ್ಲಿ ನಾವೆಲ್ಲರೂ ಒಂದಾಗಿದ್ದೇವೆ ಎಂದು ಹೇಳುತ್ತಲೇ ಇರುತ್ತಾರೆ. ಆವರು ಯಾರಿಗೋಸ್ಕರ ಒಂದಾಗಿದ್ದಾರೆ? ಅವರು ಒಂದಾಗಿರುವುದು ಅಧಿಕಾರ ಮತ್ತು ಕುರ್ಚಿಗಾಗಿ ಅಷ್ಟೇ. ಆದರೆ ಕುರ್ಚಿ ಕೊಟ್ಟ ಸಾರ್ವಜನಿಕರಿಗಾಗಿ ಅವರು ಏನು ಮಾಡುತ್ತಿದ್ದಾರೆ; ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ಮೈಕ್ರೋ ಫೈನಾನ್ಸ್‌ಗಳ ಬಗ್ಗೆ ರಾಜ್ಯ ಸರ್ಕಾರ ಸಭೆ ನಡೆಸುವ ಕುರಿತು ಮಾತನಾಡಿದ ಅವರು,
ಫೈನಾನ್ಸ್‌ ಕಂಪೆನಿಗಳು ಪರವಾನಗಿ ಇಲ್ಲದೇ ಅಣಬೆ ರೀತಿ ಹುಟ್ಟಿಕೊಂಡಿದ್ದು, ಈ ಫೈನಾನ್ಸ್‌ಗಳ ಹಾವಳಿ ಬಗ್ಗೆ ಒಂದು ತಿಂಗಳಿನಿಂದಲೂ ಚರ್ಚೆಯಾಗುತ್ತಿದೆ. ಅಲ್ಲದೇ ರಾಜ್ಯ ನಾನಾ ಕಡೆಗಳಲ್ಲಿ ಮೈಕ್ರೋ ಫೈನಾನ್ಸ್‌ ಕಂಪೆನಿಗಳಿಂದ ಜನರು ಬೇಸತ್ತು ಮನೆ-ಹಳ್ಳಿಗಳನ್ನೇ ಬಿಟ್ಟು ಹೋಗುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ರೀತಿಯ ಕ್ರಮವನ್ನು ಕೈಗೊಂಡಿಲ್ಲ. ಜೊತೆಗೆ ನೊಂದವರಿಗೆ ಮಾನಸಿಕ ಸ್ಥೈರ್ಯವನ್ನು ಸಹ ತುಂಬಲಿಲ್ಲ. ಈ ಫೈನಾನ್ಸ್‌ ಕಂಪೆನಿಗಳ ಕಿರುಕುಳದಿಂದ ಅನೇಕ ಜನರು ಪ್ರಾಣ ಕಳೆದುಕೊಂಡ ಮೇಲೆ, ಊರು ಬಿಟ್ಟು ಹೋದ ಮೇಲೆ ಸಭೆ ನಡೆಸಿ ಚರ್ಚಿಸಿದರೆ ಏನು ಪ್ರಯೋಜನ ಎಂದು ಲೇವಡಿ ಮಾಡಿದರು.

ಇನ್ನೂ ತನ್ನ ಸಂಸದ ಕ್ಷೇತ್ರವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 60 ಖಾಸಗಿ ಫೈನಾನ್ಸ್‌ಗಳಿದ್ದು, ಅವುಗಳಲ್ಲಿ 14 ಮಾತ್ರ ಪರವಾನಗಿ ಪಡೆದವು. ಇನ್ನುಳಿದೆಲ್ಲವೂ ಕಾನೂನು ಉಲ್ಲಂಘಿಸಿ ಕೆಲಸ ಮಾಡುತ್ತಿವೆ. ಅಲ್ಲದೇ ಆ ಫೈನಾನ್ಸ್‌ ಕಂಪೆನಿಗಳ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳುವ ಅಧಿಕಾರ ನಮಗೆ ಇಲ್ಲ ಎಂದು ಅಲ್ಲಿನ ಜಿಲ್ಲಾಧಿಕಾರಿಯೇ ಮಾಹಿತಿ ನೀಡಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ʼನನ್ನ ಮೇಲೆ ಕ್ರಮ ಕೈಗೊಳ್ಳಲು ಧಮ್‌ ಬೇಕುʼ ಎಂಬ ಶಾಸಕ ಜಿ.ಟಿ.ದೇವೇಗೌಡರವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಜಿ.ಟಿ.ದೇವೇಗೌಡರು ದೊಡ್ಡವರಿದ್ದಾರೆ. ಪಕ್ಷದಲ್ಲಿ ತೀರ್ಮಾನಿಸಿ, ನಮ್ಮ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

7 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

7 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

9 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago