ಮೈಸೂರು

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹದೇವಪ್ಪ, ತನ್ವೀರ್ ಸೇಠ್ ಹಾಗೂ ವೆಂಕಟೇಶ್ ಅವರಂತಹ ಹಿರಿಯ ನಾಯಕರಿಗೆ ಸಚಿವ ಸ್ಥಾನ ತಪ್ಪಲು ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಎಂದು ಗಂಭೀರ ಆರೋಪ ಮಾಡಿದರು.

ತಮ್ಮ ಮಗನಿಗಾಗಿ ಕಾಂಗ್ರೆಸ್‌ನ ಹಿರಿಯ ಶಾಸಕರಿಗೆ ಸಚಿವ ಸ್ಥಾನ ತಪ್ಪಿಸಲಾಗಿದೆ. ಇದರ ಪರಿಣಾಮವಾಗಿ ಮೈಸೂರು ಜಿಲ್ಲೆಯಲ್ಲಿ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಶ್ವನಾಥ್ ಕಿಡಿಕಾರಿದರು.

ಇದೇ ವೇಳೆ ಅಹಿಂದ ವಿಚಾರದಲ್ಲೂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಶ್ವನಾಥ್ ಅವರು, ಸಂಕಷ್ಟ ಬಂದಾಗ ಮಾತ್ರ ಅಹಿಂದ ಜಪ ಮಾಡುತ್ತಾರೆ ಎಂದು ಆರೋಪಿಸಿದರು. ಅಧಿಕಾರದಲ್ಲಿದ್ದಾಗ ಅಹಿಂದ ಸಮುದಾಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಜಾತಿಗಣತಿ ವರದಿಯನ್ನು ಅಧಿಕಾರದಲ್ಲಿದ್ದಾಗ ಬಿಡುಗಡೆ ಮಾಡದ ಅವರು, ಈಗ ಅದನ್ನೇ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

ಅಹಿಂದ ಸಮಾವೇಶಕ್ಕೆ ಡಾ. ಜಿ. ಪರಮೇಶ್ವರ್ ಅವರಿಂದ ಚಾಲನೆ ಕೊಡಿಸಿರುವುದನ್ನೂ ಪ್ರಶ್ನಿಸಿದ ಅವರು, ಈ ಹಿಂದೆ ಪರಮೇಶ್ವರ್ ಚುನಾವಣೆಯಲ್ಲಿ ಸೋಲಲು ಸಿದ್ದರಾಮಯ್ಯ ಕಾರಣ ಎಂಬ ಆರೋಪವಿತ್ತು ಎಂದು ಹೇಳಿದರು.

ಸರ್ಕಾರಿ ನಿವಾಸ ತೆರವು ವಿಚಾರದಲ್ಲೂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿದ ಅವರು, ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಸರ್ಕಾರಿ ನಿವಾಸ ತೆರವು ವಿಚಾರದಲ್ಲೂ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಡೀ ಘಟನೆಗೆ ಸಿದ್ದರಾಮಯ್ಯ ಅವರೇ ಕಾರಣ. ಭೈರತಿ ಸುರೇಶ್ ಅವರು ಸಿದ್ದರಾಮಯ್ಯ ಅವರ ಶಿಷ್ಯರಾಗಿದ್ದು, ಈ ಎಲ್ಲದರ ಹಿಂದೆ ಪಿತೂರಿ ಇದೆ ಎಂದು ದೂರಿದರು.

ಮಹದೇವಪ್ಪ ಅವರು ದಲಿತ ನಾಯಕರು. ಅವರು ಮನೆಯಲ್ಲಿರುವಾಗಲೇ ನಿವಾಸ ತೆರವು ಮಾಡಿಸಿರುವುದು ದಲಿತರಿಗೆ ಮಾಡಿದ ಅವಮಾನ. ತಮ್ಮ ಅವಧಿ ಮುಗಿದರೂ ಸಿದ್ದರಾಮಯ್ಯ ಸರ್ಕಾರಿ ನಿವಾಸ ಬಿಟ್ಟಿಲ್ಲ. ಆದರೆ ಇತರರು ಮಾತ್ರ ಸರ್ಕಾರಿ ನಿವಾಸ ಖಾಲಿ ಮಾಡಬೇಕು ಎಂಬ ಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ತಮ್ಮ ಮಗ ಮತ್ತು ಮೊಮ್ಮಗನ ರಾಜಕೀಯ ಭವಿಷ್ಯಕ್ಕಾಗಿ ಯಾವುದೇ ಹಂತಕ್ಕೂ ಇಳಿಯುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

53 seconds ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

7 mins ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

54 mins ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

2 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

10 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಾಗಲಿ

ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ವನಸಿರಿ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಹಾಗೆ ಹಲವು ದೇವಾಲಯಗಳ ಬೀಡು, ಈ…

10 hours ago