ಮೈಸೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಕಂಪನಿಗೆ ಭೂಮಿ ನೀಡುವುದನ್ನು ನಾವು ತಡೆದೆವು. ಆದರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಅನುಮತಿ ನೀಡಿದರು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಕಿಡಿಕಾರಿದರು.
ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಕಾಂಗ್ರೆಸ್ಗೂ ಬಿಜೆಪಿಯವರಿಗೂ ಯಾವುದೇ ವ್ಯತ್ಯಾಸವಿಲ್ಲದಾಗಿದೆ. ನಾನು ಸಹ ಬಿಜೆಪಿಯಲ್ಲಿದ್ದವನು ಬಿಜೆಪಿ ಸರ್ಕಾರ ಬರಲು ಕಾರಣನಾದವನು. ಬಿಜೆಪಿ ಹಾಗೂ ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಳ್ಳುತ್ತಿವೆ. ಬಿಜೆಪಿಯು ಸುಳ್ಳು ಹೇಳಿ ಅಧಿಕಾರ ಕಳೆದುಕೊಂಡಿತು. ಈಗಿನ ಸರ್ಕಾರಕ್ಕೂ ಅದೇ ಪರಿಸ್ಥಿತಿ ಬರುತ್ತದೆ ಎಂದು ಹೇಳಿದರು.
ಜನಾರ್ಧರೆಡ್ಡಿಗೂ ಸಿದ್ದರಾಮಯ್ಯಗೂ ಸಹ ಯಾವುದೇ ವ್ಯತ್ಯಾಸವಿಲ್ಲ .ಜನರ ವಿಶ್ವಾಸ ಕಳೆದುಕೊಂಡಿರುವ ನೀವು ಸಾಧನಾ ಸಮಾವೇಶ ಮಾಡ್ತಿದ್ದೀರಿ? ನೀವು ಬರೀ ಸುಳ್ಳು ಬೂಟಾಟಿಕೆ ಮಾಡುತ್ತಿದ್ದೀರಿ. ಇದೊಂದು ಜನರಿಗೆ ಟೋಪಿ ಹಾಕುವ ಪ್ರಚಾರದ ಸರ್ಕಾರ ಎಂದು ಕುಟುವಾಗಿ ಟೀಕಿಸಿದರು
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…