ಮೈಸೂರು

ಆನ್​​ಲೈನ್​ ಮೂಲಕ ಹೆಚ್​ ವಿಶ್ವನಾಥ್ ಪುತ್ರನಿಗೆ ವಂಚನೆ

ಮೈಸೂರು : ಆನ್​ಲೈನ್​ ವಂಚನೆ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಎಷ್ಟೇ ವಂಚನೆ ಪ್ರಕರಣಗಳು ಬೆಳಕಿಗೆ ಬಂದರೂ, ಜನಸಾಮಾನ್ಯರು ಮಾತ್ರ ಇಂತಹವರ ಬಲೆಗೆ ಬೀಳುವುದು ಮಾತ್ರ ತಪ್ಪುತ್ತಿಲ್ಲ. ಮುಖ್ಯವಾಗಿ ಶಿಕ್ಷಣವಂತರೇ ಇಂತಹವರ ಗಾಳಕ್ಕೆ ಬಿದ್ದು, ಹಣ ಕಳೆದುಕೊಳ್ಳುತ್ತಿದ್ದಾರೆ. ಅದರಂತೆ ಇದೀಗ ಆನ್‌ಲೈನ್ ವಂಚನೆಯ ಜಾಲಕ್ಕೆ ಎಂಎಲ್‌ಸಿ ಎಚ್ ವಿಶ್ವನಾಥ್ ಪುತ್ರ ಅಮಿತ್ ಬಿದ್ದು, ಬರೊಬ್ಬರಿ 1.99 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಬಳಿಕ ಘಟನೆ ಸೈಬರ್ ಠಾಣೆಗೆ ಕರೆ ಮಾಡಿ ದೂರು ನೀಡಿದ್ದಾರೆ.

ಘಟನೆ ವಿವರ : ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಅವರು ಹಣ ಡ್ರಾ ಮಾಡಲು ಎಟಿಎಂಗೆ ಹೋಗಿದ್ದಾರೆ. ಈ ವೇಳೆ ಹಣ ಬಾರದ ಹಿನ್ನೆಲೆ ಗೂಗಲ್‌ನಲ್ಲಿ ಕಸ್ಟಮರ್ ಕೇರ್ ನಂಬರ್ ಹುಡುಕಿ ಕರೆ ಮಾಡಿದ್ದಾರೆ. ನಂತರ ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿ, ಬ್ಯಾಂಕ್ ಖಾತೆ ಬಗ್ಗೆ ವಿವರ ಪಡೆದು, ಅವರ ಖಾತೆಯಿಂದ 1.99 ಲಕ್ಷ ಹಣ ಲಪಟಾಯಿಸಿದ್ದಾನೆ.

lokesh

Recent Posts

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

8 mins ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

20 mins ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

56 mins ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

1 hour ago

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

2 hours ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

2 hours ago