ಮೈಸೂರು : ಆನ್ಲೈನ್ ವಂಚನೆ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಎಷ್ಟೇ ವಂಚನೆ ಪ್ರಕರಣಗಳು ಬೆಳಕಿಗೆ ಬಂದರೂ, ಜನಸಾಮಾನ್ಯರು ಮಾತ್ರ ಇಂತಹವರ ಬಲೆಗೆ ಬೀಳುವುದು ಮಾತ್ರ ತಪ್ಪುತ್ತಿಲ್ಲ. ಮುಖ್ಯವಾಗಿ ಶಿಕ್ಷಣವಂತರೇ ಇಂತಹವರ ಗಾಳಕ್ಕೆ ಬಿದ್ದು, ಹಣ ಕಳೆದುಕೊಳ್ಳುತ್ತಿದ್ದಾರೆ. ಅದರಂತೆ ಇದೀಗ ಆನ್ಲೈನ್ ವಂಚನೆಯ ಜಾಲಕ್ಕೆ ಎಂಎಲ್ಸಿ ಎಚ್ ವಿಶ್ವನಾಥ್ ಪುತ್ರ ಅಮಿತ್ ಬಿದ್ದು, ಬರೊಬ್ಬರಿ 1.99 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಬಳಿಕ ಘಟನೆ ಸೈಬರ್ ಠಾಣೆಗೆ ಕರೆ ಮಾಡಿ ದೂರು ನೀಡಿದ್ದಾರೆ.
ಘಟನೆ ವಿವರ : ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಅವರು ಹಣ ಡ್ರಾ ಮಾಡಲು ಎಟಿಎಂಗೆ ಹೋಗಿದ್ದಾರೆ. ಈ ವೇಳೆ ಹಣ ಬಾರದ ಹಿನ್ನೆಲೆ ಗೂಗಲ್ನಲ್ಲಿ ಕಸ್ಟಮರ್ ಕೇರ್ ನಂಬರ್ ಹುಡುಕಿ ಕರೆ ಮಾಡಿದ್ದಾರೆ. ನಂತರ ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿ, ಬ್ಯಾಂಕ್ ಖಾತೆ ಬಗ್ಗೆ ವಿವರ ಪಡೆದು, ಅವರ ಖಾತೆಯಿಂದ 1.99 ಲಕ್ಷ ಹಣ ಲಪಟಾಯಿಸಿದ್ದಾನೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…