ಮೈಸೂರು

ಆರು ತಿಂಗಳಲ್ಲಿ ಹಳೇ ಉಂಡುವಾಡಿ ಕಾಮಗಾರಿ ಪೂರ್ಣ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ನಗರ ಮತ್ತು ಹೊರ ವಲಯದ ಬಡಾವಣೆಗಳು, ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ದಿನದ 24 ಗಂಟೆಗಳ ಕಾಲ ಕುಡಿಯುವ ನೀರು ಒದಗಿಸುವ ಹಳೇ ಉಂಡುವಾಡಿ ಯೋಜನೆ ಕಾಮಗಾರಿ ಆರು ತಿಂಗಳಲ್ಲಿ ಮುಗಿಯಲಿದ್ದು, ಅಲ್ಲಿಯವರೆಗೆ ಕಾವೇರಿ, ಕಬಿನಿ ಜಲಮೂಲದಿಂದ ಒದಗಿಸುತ್ತಿರುವ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ನಗರಪಾಲಿಕೆ ವಲಯ ಕಚೇರಿ 3ರಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುವ ಪಾಲಿಕೆ ವಲಯ ಕಚೇರಿ, ಪಟ್ಟಣ ಪಂಚಾಯಿತಿ, ನಗರಸಭೆ ಅಧಿಕಾರಿಗಳ ಸಭೆಯಲ್ಲಿ ಮುಂದಿನ 6 ತಿಂಗಳ ಕಾಲ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾಗಿರುವ ಕಾರಣ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತರ ಆಸೀಫ್ ಇಕ್ಬಾಲ್ ಖಲೀಲ್ ಮಾತನಾಡಿ, ೨೦೧೮ರಲ್ಲಿ ಹಳೇ ಉಂಡುವಾಡಿ ಯೋಜನೆಗೆ ಅನುಮೋದನೆ ಸಿಕ್ಕಿದ್ದು, ಮೂರು ವರ್ಷಗಳಿಂದ ಕಾಮಗಾರಿ ಆರಂಭವಾಗಿ ಪ್ರಗತಿಯಲ್ಲಿದೆ. 31 ಓವರ್‌ಹೆಡ್ ಟ್ಯಾಂಕ್‌ಗಳಲ್ಲಿ 22 ಪೂರ್ಣವಾಗಿ, 7 ಟ್ಯಾಂಕ್ ಏಪ್ರಿಲ್ ತಿಂಗಳಲ್ಲಿ ಮುಗಿಯಲಿದೆ. ಉಳಿದ 7 ಜೂನ್ ತಿಂಗಳಲ್ಲಿ ಮುಗಿಯಲಿದೆ. ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದೆ ಎಂದು ವಿವರಿಸಿದರು.

ಬೆಳಗೊಳ 1ನೇ ಹಂತದಲ್ಲಿ 2.27 ಎಂಎಲ್‌ಡಿ, 2ನೇ ಹಂತದ 13..62, 3ನೇ ಹಂತದಲ್ಲಿ 36.32೨ ಎಂಎಲ್‌ಡಿ, ಹೊಂಗಳ್ಳಿ 2ನೇ ಹಂತ 54, 3ನೇ ಹಂತದ 48 ಎಂಎಲ್‌ಡಿ, ಮೇಳಾಪುರ 1ನೇ ಹಂತ 50 ಎಂಎಲ್‌ಡಿ, ಕಬಿನಿ ಜಲಾಶಯದಿಂದ 60 ಎಂಎಲ್‌ಡಿ ನೀರು ಡ್ರಾ ಮಾಡಲಾಗುತ್ತಿದೆ. ಹಳೇ ಉಂಡುವಾಡಿ ಯೋಜನೆ ಪೂರ್ಣವಾಗುವವರೆಗೆ ಮೇಳಾಪುರ, ಹೊಂಗಳ್ಳಿ ಮೂಲದಿಂದ ರಮ್ಮನಹಳ್ಳಿ ಭಾಗಕ್ಕೆ, ಕಬಿನಿ ಮೂಲದಿಂದ ಶ್ರೀರಾಂಪುರ, ಬೋಗಾದಿ ಭಾಗಕ್ಕೆ ಹರಿಸಲಾಗುತ್ತಿದೆ. ಕಬಿನಿ 2ನೇ ಹಂತದ 60 ಎಂಎಲ್‌ಡಿ ನೀರಿನಲ್ಲಿ ವಿಜಯನಗರ 4ನೇ ಹಂತ, ಎಸ್‌ಬಿಎಂ ಲೇಔಟ್, ರೂಪಾನಗರ ಇನ್ನಿತರೆ ಪ್ರದೇಶಗಳಿಗೆ ಹರಿಸಲಾಗುತ್ತದೆ ಎಂದರು
.
ಈ ವೇಳೆ ಶಾಸಕ ಜಿ.ಟಿ.ದೇವೇಗೌಡ ಅವರು ಮಾತನಾಡಿ, ಹಾಲಿ ಬಡಾವಣೆಗಳು, ಗ್ರಾಮಗಳಿಗೆ ನೀರು ಕೊಡುವ ಜತೆಗೆ ಖಾಸಗಿ ಬಡಾವಣೆಗಳಿಗೆ ನೀರು ಕೊಡಬೇಕು. ಬಡಾವಣೆಗಳಲ್ಲಿ ನಿರ್ಮಿಸಿರುವ ಓವರ್‌ಹೆಡ್ ಟ್ಯಾಂಕ್‌ಗೆ ಸಂಪರ್ಕ ಕೊಡಬೇಕು. ಎಲ್ಲೆಲ್ಲಿ ಪೈಪ್‌ಲೈನ್ ಅಗತ್ಯವಿದೆ, ಯಾವ್ಯಾವ ಕಡೆಗಳಲ್ಲಿ ಸಂಪರ್ಕ ಕೊಡಬೇಕು, ಎಲ್ಲಿ ಮಿಸ್ಸಿಂಗ್ ಲಿಂಕ್ ಇದೆ ಎನ್ನುವುದನ್ನು ಪರಿಶೀಲಿಸಬೇಕು. ನಗರಪಾಲಿಕೆ, ಸ್ಥಳೀಯ ಸಂಸ್ಥೆಗಳು,ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳು ಜಂಟಿ ಸರ್ವೆ ಮಾಡಿ ವರದಿ ತಯಾರಿಸಬೇಕು. ಖಾಸಗಿ ಬಡಾವಣೆಗಳಿಗೆ ನೀರು ಕೊಡಲು ಪೈಪ್‌ಲೈನ್ ಅಗತ್ಯವಿದ್ದರೆ ತಕ್ಷಣವೇ ಕ್ರಿಯಾಯೋಜನೆ ರೂಪಿಸಿ ಅನುಮೋದನೆ ಪಡೆದು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು ಎಂದು ಸೂಚಿಸಿದರು.

ರಮ್ಮನಹಳ್ಳಿ ಪಪಂ ವ್ಯಾಪ್ತಿಯಲ್ಲಿ ಜಂಟಿ ಸರ್ವೆ ನಡೆಸಿ ಮ್ಯಾಪ್ ಮಾಡಿ ಎಲ್ಲೆಲ್ಲಿ ಏನಾಗಬೇಕೆಂದು ಗುರುತಿಸಲಾಗಿದೆ. ವಸಂತನಗರ, ಪೊಲೀಸ್ ಬಡಾವಣೆ,ಸಾತಗಳ್ಳಿ ಬಡಾವಣೆಗಳಿಗೆ ನೀರು ಹೋಗಲು ಇರುವ ಸಮಸ್ಯೆ ನಿವಾರಿಸುವ ಕೆಲಸ ನಡೆದಿದೆ. ಅದೇ ರೀತಿ ಬೇರೆ ಪಂಚಾಯಿತಿಗಳಲ್ಲೂ ಸರ್ವೆ ಮಾಡಿಸಿ ಮುಂದಿನ ಕ್ರಮಕೈಗೊಳ್ಳಬೇಕು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

7 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

7 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

7 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

7 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

11 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

12 hours ago