ಮೈಸೂರು: ನಗರದ ಜೆ.ಕೆ. ಟೈರ್ಸ್ ಆಡಳಿತ ವರ್ಗ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಕಾರ್ಮಿಕ ನ್ಯಾಯಾಲಯದ ತೀರ್ಪನ್ನು ಕಡೆಗಣಿಸಿ, ಬದಲಿ ಕಾರ್ಮಿಕರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದೆ ಎಂದು ಜೆ.ಕೆ. ಟೈರ್ಸ್ ಬದಲಿ ಮತ್ತು ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಇಂದಿರೇಶ್ ಆರೋಪಿಸಿದರು.
ಕಾರ್ಖಾನೆಯ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಸುಮಾರು 5 ವರ್ಷ ಹೋರಾಟ ಮಾಡಿ ಯಶ ಗಳಿಸಿದ ಮೇಲೂ ನ್ಯಾಯಾಲಯದ ಆದೇಶದಂತೆ ಮತ್ತೆ ನಿಯುಕ್ತಿರಾಗಿರುವ ಬದಲಿ ಕೆಲಸಗಾರರನ್ನು ಇನ್ನಿಲ್ಲದಂತೆ ಶೋಷಿಸಲಾಗುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.
ಕಾರ್ಮಿಕ ಸಂಘಟನೆ ರಚಿಸಿದ ಒಂದೇ ಕಾರಣಕ್ಕೆ ಸಮಾಲೋಚನೆ ಹೆಸರಿನಲ್ಲಿ ಬದಲಿ ಕಾರ್ಮಿಕರನ್ನು ಕೆಲಸದಿಂದ ತೆಗೆದಿದ್ದರು. ಜೆ.ಕೆ.ಟೈರ್ಸ್ ಈ ಕ್ರಮ ಕಾರ್ಮಿಕ ನ್ಯಾಯಾಲಯ ಕಾನೂನು ಬಾಹಿರ ಎಂದು ತಿಳಿಸಿದ ನಂತರ ಮತ್ತೆ ಕೆಲಸಕ್ಕೆ ಬದಲಿ ಕಾರ್ಮಿಕರನ್ನು ನಿಯುಕ್ತಿಗೊಳಿಸಲಾಗಿತ್ತು.
ಇಂತಹ ಬದಲಿ ಕಾರ್ಮಿಕರಿಗೆ ಅವರ ದೈಹಿಕ ಸಾಮರ್ಥ್ಯ ಮೀರಿದ ಕೆಲಸಕ್ಕೆ ಹಾಕಲಾಗುತ್ತಿದೆ. 50 ವರ್ಷ ಮೇಲ್ಪಟ್ಟವರಿಗೂ ಸುಮಾರು 50 ರಿಂದ 60 ಕೆಜಿ ತೂಕದ ಟೈರ್ಗಳನ್ನು ನಾಲ್ಕು ಅಡಿಗೂ ಹೆಚ್ಚು ಎತ್ತರದವರೆಗೆ ಎತ್ತುವಂತಹ ಕೆಲಸ ನೀಡಲಾಗುತ್ತಿದೆ. ಇದು ಈ ಬದಲಿ ಕಾರ್ಮಿಕರು ತಾವಾಗಿಯೇ ಕೆಲಸ ಬಿಟ್ಟು ಹೋಗಲೆಂದು ಮಾಡುವ ಹುನ್ನಾರ ಎಂದು ಆರೋಪಿಸಿದರು.
ಹೀಗಾಗಿ ಕಾರ್ಖಾನೆಯ ಆಡಳಿತ ವರ್ಗ ಅನುಸರಿಸುತ್ತಿರುವ ಈ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಕಾರ್ಮಿಕ ಇಲಾಖೆ, ಕಾರ್ಮಿಕ ನ್ಯಾಯಾಲಯ ಮತ್ತು ಮಾನವ ಹಕ್ಕು ಆಯೋಗ ಮಧ್ಯ ಪ್ರವೇಶಿಸಿ ಬದಲಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕೆಂದು ಇಂದಿರೇಶ್ ಆಗ್ರಹಿಸಿದರು.
ರಾಜ್ಯ ಬಿಎಂಎಸ್ ಕಾರ್ಯದರ್ಶಿ ವಾಸುದೇವ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್ನ ಕೊರಿಡಾಂಗ್…
ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…