ಮೈಸೂರು

ಮೈಸೂರು | ಜೆ.ಕೆ.ಟೈರ್ಸ್ ಆಡಳಿತ ವರ್ಗದಿಂದ ಬದಲಿ ಕಾರ್ಮಿಕರಿಗೆ ಕಿರುಕುಳ : ಆರೋಪ

ಮೈಸೂರು: ನಗರದ ಜೆ.ಕೆ. ಟೈರ್ಸ್ ಆಡಳಿತ ವರ್ಗ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಕಾರ್ಮಿಕ ನ್ಯಾಯಾಲಯದ ತೀರ್ಪನ್ನು ಕಡೆಗಣಿಸಿ, ಬದಲಿ ಕಾರ್ಮಿಕರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದೆ ಎಂದು ಜೆ.ಕೆ. ಟೈರ್ಸ್ ಬದಲಿ ಮತ್ತು ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಇಂದಿರೇಶ್ ಆರೋಪಿಸಿದರು.

ಕಾರ್ಖಾನೆಯ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಸುಮಾರು 5 ವರ್ಷ ಹೋರಾಟ ಮಾಡಿ ಯಶ ಗಳಿಸಿದ ಮೇಲೂ ನ್ಯಾಯಾಲಯದ ಆದೇಶದಂತೆ ಮತ್ತೆ ನಿಯುಕ್ತಿರಾಗಿರುವ ಬದಲಿ ಕೆಲಸಗಾರರನ್ನು ಇನ್ನಿಲ್ಲದಂತೆ ಶೋಷಿಸಲಾಗುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.

ಕಾರ್ಮಿಕ ಸಂಘಟನೆ ರಚಿಸಿದ ಒಂದೇ ಕಾರಣಕ್ಕೆ ಸಮಾಲೋಚನೆ ಹೆಸರಿನಲ್ಲಿ ಬದಲಿ ಕಾರ್ಮಿಕರನ್ನು ಕೆಲಸದಿಂದ ತೆಗೆದಿದ್ದರು. ಜೆ.ಕೆ.ಟೈರ್ಸ್ ಈ ಕ್ರಮ ಕಾರ್ಮಿಕ ನ್ಯಾಯಾಲಯ ಕಾನೂನು ಬಾಹಿರ ಎಂದು ತಿಳಿಸಿದ ನಂತರ ಮತ್ತೆ ಕೆಲಸಕ್ಕೆ ಬದಲಿ ಕಾರ್ಮಿಕರನ್ನು ನಿಯುಕ್ತಿಗೊಳಿಸಲಾಗಿತ್ತು.

ಇಂತಹ ಬದಲಿ ಕಾರ್ಮಿಕರಿಗೆ ಅವರ ದೈಹಿಕ ಸಾಮರ್ಥ್ಯ ಮೀರಿದ ಕೆಲಸಕ್ಕೆ ಹಾಕಲಾಗುತ್ತಿದೆ. 50 ವರ್ಷ ಮೇಲ್ಪಟ್ಟವರಿಗೂ ಸುಮಾರು 50 ರಿಂದ 60 ಕೆಜಿ ತೂಕದ ಟೈರ್‌ಗಳನ್ನು ನಾಲ್ಕು ಅಡಿಗೂ ಹೆಚ್ಚು ಎತ್ತರದವರೆಗೆ ಎತ್ತುವಂತಹ ಕೆಲಸ ನೀಡಲಾಗುತ್ತಿದೆ. ಇದು ಈ ಬದಲಿ ಕಾರ್ಮಿಕರು ತಾವಾಗಿಯೇ ಕೆಲಸ ಬಿಟ್ಟು ಹೋಗಲೆಂದು ಮಾಡುವ ಹುನ್ನಾರ ಎಂದು ಆರೋಪಿಸಿದರು.

ಹೀಗಾಗಿ ಕಾರ್ಖಾನೆಯ ಆಡಳಿತ ವರ್ಗ ಅನುಸರಿಸುತ್ತಿರುವ ಈ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಕಾರ್ಮಿಕ ಇಲಾಖೆ, ಕಾರ್ಮಿಕ ನ್ಯಾಯಾಲಯ ಮತ್ತು ಮಾನವ ಹಕ್ಕು ಆಯೋಗ ಮಧ್ಯ ಪ್ರವೇಶಿಸಿ ಬದಲಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕೆಂದು ಇಂದಿರೇಶ್ ಆಗ್ರಹಿಸಿದರು.

ರಾಜ್ಯ ಬಿಎಂಎಸ್ ಕಾರ್ಯದರ್ಶಿ ವಾಸುದೇವ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

24 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

27 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

41 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

47 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

4 hours ago