ಮೈಸೂರು: ನಗರದ ಜೆ.ಕೆ. ಟೈರ್ಸ್ ಆಡಳಿತ ವರ್ಗ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಕಾರ್ಮಿಕ ನ್ಯಾಯಾಲಯದ ತೀರ್ಪನ್ನು ಕಡೆಗಣಿಸಿ, ಬದಲಿ ಕಾರ್ಮಿಕರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದೆ ಎಂದು ಜೆ.ಕೆ. ಟೈರ್ಸ್ ಬದಲಿ ಮತ್ತು ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಇಂದಿರೇಶ್ ಆರೋಪಿಸಿದರು.
ಕಾರ್ಖಾನೆಯ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಸುಮಾರು 5 ವರ್ಷ ಹೋರಾಟ ಮಾಡಿ ಯಶ ಗಳಿಸಿದ ಮೇಲೂ ನ್ಯಾಯಾಲಯದ ಆದೇಶದಂತೆ ಮತ್ತೆ ನಿಯುಕ್ತಿರಾಗಿರುವ ಬದಲಿ ಕೆಲಸಗಾರರನ್ನು ಇನ್ನಿಲ್ಲದಂತೆ ಶೋಷಿಸಲಾಗುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.
ಕಾರ್ಮಿಕ ಸಂಘಟನೆ ರಚಿಸಿದ ಒಂದೇ ಕಾರಣಕ್ಕೆ ಸಮಾಲೋಚನೆ ಹೆಸರಿನಲ್ಲಿ ಬದಲಿ ಕಾರ್ಮಿಕರನ್ನು ಕೆಲಸದಿಂದ ತೆಗೆದಿದ್ದರು. ಜೆ.ಕೆ.ಟೈರ್ಸ್ ಈ ಕ್ರಮ ಕಾರ್ಮಿಕ ನ್ಯಾಯಾಲಯ ಕಾನೂನು ಬಾಹಿರ ಎಂದು ತಿಳಿಸಿದ ನಂತರ ಮತ್ತೆ ಕೆಲಸಕ್ಕೆ ಬದಲಿ ಕಾರ್ಮಿಕರನ್ನು ನಿಯುಕ್ತಿಗೊಳಿಸಲಾಗಿತ್ತು.
ಇಂತಹ ಬದಲಿ ಕಾರ್ಮಿಕರಿಗೆ ಅವರ ದೈಹಿಕ ಸಾಮರ್ಥ್ಯ ಮೀರಿದ ಕೆಲಸಕ್ಕೆ ಹಾಕಲಾಗುತ್ತಿದೆ. 50 ವರ್ಷ ಮೇಲ್ಪಟ್ಟವರಿಗೂ ಸುಮಾರು 50 ರಿಂದ 60 ಕೆಜಿ ತೂಕದ ಟೈರ್ಗಳನ್ನು ನಾಲ್ಕು ಅಡಿಗೂ ಹೆಚ್ಚು ಎತ್ತರದವರೆಗೆ ಎತ್ತುವಂತಹ ಕೆಲಸ ನೀಡಲಾಗುತ್ತಿದೆ. ಇದು ಈ ಬದಲಿ ಕಾರ್ಮಿಕರು ತಾವಾಗಿಯೇ ಕೆಲಸ ಬಿಟ್ಟು ಹೋಗಲೆಂದು ಮಾಡುವ ಹುನ್ನಾರ ಎಂದು ಆರೋಪಿಸಿದರು.
ಹೀಗಾಗಿ ಕಾರ್ಖಾನೆಯ ಆಡಳಿತ ವರ್ಗ ಅನುಸರಿಸುತ್ತಿರುವ ಈ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಕಾರ್ಮಿಕ ಇಲಾಖೆ, ಕಾರ್ಮಿಕ ನ್ಯಾಯಾಲಯ ಮತ್ತು ಮಾನವ ಹಕ್ಕು ಆಯೋಗ ಮಧ್ಯ ಪ್ರವೇಶಿಸಿ ಬದಲಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕೆಂದು ಇಂದಿರೇಶ್ ಆಗ್ರಹಿಸಿದರು.
ರಾಜ್ಯ ಬಿಎಂಎಸ್ ಕಾರ್ಯದರ್ಶಿ ವಾಸುದೇವ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…