ಮೈಸೂರು

ಮೈಸೂರು | ಜೆ.ಕೆ.ಟೈರ್ಸ್ ಆಡಳಿತ ವರ್ಗದಿಂದ ಬದಲಿ ಕಾರ್ಮಿಕರಿಗೆ ಕಿರುಕುಳ : ಆರೋಪ

ಮೈಸೂರು: ನಗರದ ಜೆ.ಕೆ. ಟೈರ್ಸ್ ಆಡಳಿತ ವರ್ಗ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಕಾರ್ಮಿಕ ನ್ಯಾಯಾಲಯದ ತೀರ್ಪನ್ನು ಕಡೆಗಣಿಸಿ, ಬದಲಿ ಕಾರ್ಮಿಕರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದೆ ಎಂದು ಜೆ.ಕೆ. ಟೈರ್ಸ್ ಬದಲಿ ಮತ್ತು ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಇಂದಿರೇಶ್ ಆರೋಪಿಸಿದರು.

ಕಾರ್ಖಾನೆಯ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಸುಮಾರು 5 ವರ್ಷ ಹೋರಾಟ ಮಾಡಿ ಯಶ ಗಳಿಸಿದ ಮೇಲೂ ನ್ಯಾಯಾಲಯದ ಆದೇಶದಂತೆ ಮತ್ತೆ ನಿಯುಕ್ತಿರಾಗಿರುವ ಬದಲಿ ಕೆಲಸಗಾರರನ್ನು ಇನ್ನಿಲ್ಲದಂತೆ ಶೋಷಿಸಲಾಗುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.

ಕಾರ್ಮಿಕ ಸಂಘಟನೆ ರಚಿಸಿದ ಒಂದೇ ಕಾರಣಕ್ಕೆ ಸಮಾಲೋಚನೆ ಹೆಸರಿನಲ್ಲಿ ಬದಲಿ ಕಾರ್ಮಿಕರನ್ನು ಕೆಲಸದಿಂದ ತೆಗೆದಿದ್ದರು. ಜೆ.ಕೆ.ಟೈರ್ಸ್ ಈ ಕ್ರಮ ಕಾರ್ಮಿಕ ನ್ಯಾಯಾಲಯ ಕಾನೂನು ಬಾಹಿರ ಎಂದು ತಿಳಿಸಿದ ನಂತರ ಮತ್ತೆ ಕೆಲಸಕ್ಕೆ ಬದಲಿ ಕಾರ್ಮಿಕರನ್ನು ನಿಯುಕ್ತಿಗೊಳಿಸಲಾಗಿತ್ತು.

ಇಂತಹ ಬದಲಿ ಕಾರ್ಮಿಕರಿಗೆ ಅವರ ದೈಹಿಕ ಸಾಮರ್ಥ್ಯ ಮೀರಿದ ಕೆಲಸಕ್ಕೆ ಹಾಕಲಾಗುತ್ತಿದೆ. 50 ವರ್ಷ ಮೇಲ್ಪಟ್ಟವರಿಗೂ ಸುಮಾರು 50 ರಿಂದ 60 ಕೆಜಿ ತೂಕದ ಟೈರ್‌ಗಳನ್ನು ನಾಲ್ಕು ಅಡಿಗೂ ಹೆಚ್ಚು ಎತ್ತರದವರೆಗೆ ಎತ್ತುವಂತಹ ಕೆಲಸ ನೀಡಲಾಗುತ್ತಿದೆ. ಇದು ಈ ಬದಲಿ ಕಾರ್ಮಿಕರು ತಾವಾಗಿಯೇ ಕೆಲಸ ಬಿಟ್ಟು ಹೋಗಲೆಂದು ಮಾಡುವ ಹುನ್ನಾರ ಎಂದು ಆರೋಪಿಸಿದರು.

ಹೀಗಾಗಿ ಕಾರ್ಖಾನೆಯ ಆಡಳಿತ ವರ್ಗ ಅನುಸರಿಸುತ್ತಿರುವ ಈ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಕಾರ್ಮಿಕ ಇಲಾಖೆ, ಕಾರ್ಮಿಕ ನ್ಯಾಯಾಲಯ ಮತ್ತು ಮಾನವ ಹಕ್ಕು ಆಯೋಗ ಮಧ್ಯ ಪ್ರವೇಶಿಸಿ ಬದಲಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕೆಂದು ಇಂದಿರೇಶ್ ಆಗ್ರಹಿಸಿದರು.

ರಾಜ್ಯ ಬಿಎಂಎಸ್ ಕಾರ್ಯದರ್ಶಿ ವಾಸುದೇವ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

6 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

7 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

7 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

8 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

9 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

10 hours ago