ಮೈಸೂರು: ನಗರದ ಜೆ.ಕೆ. ಟೈರ್ಸ್ ಆಡಳಿತ ವರ್ಗ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಕಾರ್ಮಿಕ ನ್ಯಾಯಾಲಯದ ತೀರ್ಪನ್ನು ಕಡೆಗಣಿಸಿ, ಬದಲಿ ಕಾರ್ಮಿಕರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದೆ ಎಂದು ಜೆ.ಕೆ. ಟೈರ್ಸ್ ಬದಲಿ ಮತ್ತು ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಇಂದಿರೇಶ್ ಆರೋಪಿಸಿದರು.
ಕಾರ್ಖಾನೆಯ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಸುಮಾರು 5 ವರ್ಷ ಹೋರಾಟ ಮಾಡಿ ಯಶ ಗಳಿಸಿದ ಮೇಲೂ ನ್ಯಾಯಾಲಯದ ಆದೇಶದಂತೆ ಮತ್ತೆ ನಿಯುಕ್ತಿರಾಗಿರುವ ಬದಲಿ ಕೆಲಸಗಾರರನ್ನು ಇನ್ನಿಲ್ಲದಂತೆ ಶೋಷಿಸಲಾಗುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.
ಕಾರ್ಮಿಕ ಸಂಘಟನೆ ರಚಿಸಿದ ಒಂದೇ ಕಾರಣಕ್ಕೆ ಸಮಾಲೋಚನೆ ಹೆಸರಿನಲ್ಲಿ ಬದಲಿ ಕಾರ್ಮಿಕರನ್ನು ಕೆಲಸದಿಂದ ತೆಗೆದಿದ್ದರು. ಜೆ.ಕೆ.ಟೈರ್ಸ್ ಈ ಕ್ರಮ ಕಾರ್ಮಿಕ ನ್ಯಾಯಾಲಯ ಕಾನೂನು ಬಾಹಿರ ಎಂದು ತಿಳಿಸಿದ ನಂತರ ಮತ್ತೆ ಕೆಲಸಕ್ಕೆ ಬದಲಿ ಕಾರ್ಮಿಕರನ್ನು ನಿಯುಕ್ತಿಗೊಳಿಸಲಾಗಿತ್ತು.
ಇಂತಹ ಬದಲಿ ಕಾರ್ಮಿಕರಿಗೆ ಅವರ ದೈಹಿಕ ಸಾಮರ್ಥ್ಯ ಮೀರಿದ ಕೆಲಸಕ್ಕೆ ಹಾಕಲಾಗುತ್ತಿದೆ. 50 ವರ್ಷ ಮೇಲ್ಪಟ್ಟವರಿಗೂ ಸುಮಾರು 50 ರಿಂದ 60 ಕೆಜಿ ತೂಕದ ಟೈರ್ಗಳನ್ನು ನಾಲ್ಕು ಅಡಿಗೂ ಹೆಚ್ಚು ಎತ್ತರದವರೆಗೆ ಎತ್ತುವಂತಹ ಕೆಲಸ ನೀಡಲಾಗುತ್ತಿದೆ. ಇದು ಈ ಬದಲಿ ಕಾರ್ಮಿಕರು ತಾವಾಗಿಯೇ ಕೆಲಸ ಬಿಟ್ಟು ಹೋಗಲೆಂದು ಮಾಡುವ ಹುನ್ನಾರ ಎಂದು ಆರೋಪಿಸಿದರು.
ಹೀಗಾಗಿ ಕಾರ್ಖಾನೆಯ ಆಡಳಿತ ವರ್ಗ ಅನುಸರಿಸುತ್ತಿರುವ ಈ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಕಾರ್ಮಿಕ ಇಲಾಖೆ, ಕಾರ್ಮಿಕ ನ್ಯಾಯಾಲಯ ಮತ್ತು ಮಾನವ ಹಕ್ಕು ಆಯೋಗ ಮಧ್ಯ ಪ್ರವೇಶಿಸಿ ಬದಲಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕೆಂದು ಇಂದಿರೇಶ್ ಆಗ್ರಹಿಸಿದರು.
ರಾಜ್ಯ ಬಿಎಂಎಸ್ ಕಾರ್ಯದರ್ಶಿ ವಾಸುದೇವ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…
ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ ಮಡಿಕೇರಿ: ಅಶ್ಲೀಲ…