ಮೈಸೂರು: ನಗರದ ಜೆ.ಕೆ. ಟೈರ್ಸ್ ಆಡಳಿತ ವರ್ಗ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಕಾರ್ಮಿಕ ನ್ಯಾಯಾಲಯದ ತೀರ್ಪನ್ನು ಕಡೆಗಣಿಸಿ, ಬದಲಿ ಕಾರ್ಮಿಕರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದೆ ಎಂದು ಜೆ.ಕೆ. ಟೈರ್ಸ್ ಬದಲಿ ಮತ್ತು ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಇಂದಿರೇಶ್ ಆರೋಪಿಸಿದರು.
ಕಾರ್ಖಾನೆಯ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಸುಮಾರು 5 ವರ್ಷ ಹೋರಾಟ ಮಾಡಿ ಯಶ ಗಳಿಸಿದ ಮೇಲೂ ನ್ಯಾಯಾಲಯದ ಆದೇಶದಂತೆ ಮತ್ತೆ ನಿಯುಕ್ತಿರಾಗಿರುವ ಬದಲಿ ಕೆಲಸಗಾರರನ್ನು ಇನ್ನಿಲ್ಲದಂತೆ ಶೋಷಿಸಲಾಗುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.
ಕಾರ್ಮಿಕ ಸಂಘಟನೆ ರಚಿಸಿದ ಒಂದೇ ಕಾರಣಕ್ಕೆ ಸಮಾಲೋಚನೆ ಹೆಸರಿನಲ್ಲಿ ಬದಲಿ ಕಾರ್ಮಿಕರನ್ನು ಕೆಲಸದಿಂದ ತೆಗೆದಿದ್ದರು. ಜೆ.ಕೆ.ಟೈರ್ಸ್ ಈ ಕ್ರಮ ಕಾರ್ಮಿಕ ನ್ಯಾಯಾಲಯ ಕಾನೂನು ಬಾಹಿರ ಎಂದು ತಿಳಿಸಿದ ನಂತರ ಮತ್ತೆ ಕೆಲಸಕ್ಕೆ ಬದಲಿ ಕಾರ್ಮಿಕರನ್ನು ನಿಯುಕ್ತಿಗೊಳಿಸಲಾಗಿತ್ತು.
ಇಂತಹ ಬದಲಿ ಕಾರ್ಮಿಕರಿಗೆ ಅವರ ದೈಹಿಕ ಸಾಮರ್ಥ್ಯ ಮೀರಿದ ಕೆಲಸಕ್ಕೆ ಹಾಕಲಾಗುತ್ತಿದೆ. 50 ವರ್ಷ ಮೇಲ್ಪಟ್ಟವರಿಗೂ ಸುಮಾರು 50 ರಿಂದ 60 ಕೆಜಿ ತೂಕದ ಟೈರ್ಗಳನ್ನು ನಾಲ್ಕು ಅಡಿಗೂ ಹೆಚ್ಚು ಎತ್ತರದವರೆಗೆ ಎತ್ತುವಂತಹ ಕೆಲಸ ನೀಡಲಾಗುತ್ತಿದೆ. ಇದು ಈ ಬದಲಿ ಕಾರ್ಮಿಕರು ತಾವಾಗಿಯೇ ಕೆಲಸ ಬಿಟ್ಟು ಹೋಗಲೆಂದು ಮಾಡುವ ಹುನ್ನಾರ ಎಂದು ಆರೋಪಿಸಿದರು.
ಹೀಗಾಗಿ ಕಾರ್ಖಾನೆಯ ಆಡಳಿತ ವರ್ಗ ಅನುಸರಿಸುತ್ತಿರುವ ಈ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಕಾರ್ಮಿಕ ಇಲಾಖೆ, ಕಾರ್ಮಿಕ ನ್ಯಾಯಾಲಯ ಮತ್ತು ಮಾನವ ಹಕ್ಕು ಆಯೋಗ ಮಧ್ಯ ಪ್ರವೇಶಿಸಿ ಬದಲಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕೆಂದು ಇಂದಿರೇಶ್ ಆಗ್ರಹಿಸಿದರು.
ರಾಜ್ಯ ಬಿಎಂಎಸ್ ಕಾರ್ಯದರ್ಶಿ ವಾಸುದೇವ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…