ಮೈಸೂರು

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಕೂರ್ಗಳ್ಳಿ ಕೈಗಾರಿಕಾ ಬಡಾವಣೆಯಲ್ಲಿರುವ ಖಾಸಗಿ ಕಂಪನಿಯ ಮಾಲೀಕ ಮುರಳಿಧರ್ ಎಂಬುವರ ಮೇಲೆ ನೊಂದ ಮಹಿಳಾ ಉದ್ಯೋಗಿ ಪ್ರಕರಣ ದಾಖಲಿಸಿದ್ದಾರೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆತ ಮಹಿಳೆಯರಿಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಮಹಿಳೆಯರಿಗೆ ಮೊಬೈಲ್‌ನಿಂದ ಮೆಸೇಜ್ ಮಾಡುತ್ತಿದ್ದರು ಎಂಬ ಆರೋಪವಿದೆ. ಇದರಿಂದ ನೊಂದ ಉದ್ಯೋಗಿ ಎರಡು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಾರೆ.

ಹೀಗಿದ್ದೂ ಬಿಡದ ಮಾಲೀಕ ಮುರಳಿಧರ್ ಮಹಿಳೆ ಹಿಂದೆ ಬಿದ್ದಿದ್ದಾನೆ. ಮನೆಗೆ ಬಂದು ಕೆಲಸಕ್ಕೆ ಹಿಂದಿರುಗುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದಾನೆ. ನಿನ್ನ ಬಗ್ಗೆ ಅಪಪ್ರಚಾರ ಮಾಡುವುದಾಗಿ ಹೆದರಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಕಳೆದ ಎರಡು ತಿಂಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆಂದು ಆರೋಪಿಸಿರುವ ನೊಂದ ಮಹಿಳಾ ಉದ್ಯೋಗಿ ಮಾಲೀಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

7 mins ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

4 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

6 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

6 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

7 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

8 hours ago