ಮೈಸೂರು

ಹಾಸನ ಪೆನ್‌ಡ್ರೈವ್‌ ಪ್ರಕರಣ; ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಒಕ್ಕಲಿಗರು: ಎಂ.ಲಕ್ಷ್ಮಣ್‌

ಮೈಸೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದ ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಮಹಿಳೆಯರು ಒಕ್ಕಲಿಗರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್‌ ಹೇಳಿದ್ದಾರೆ.

ಮೈಸೂರು ನಗರ ಕಾಂಗ್ರೆಸ್‌ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೊದಲು ದೇವರಾಜೇಗೌಡರನ್ನು ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯಾಸತ್ಯತೆ ಹೊರಬರಲಿದೆ ಎಂದರು.

ಪ್ರಜ್ವಲ್ ರೇವಣ್ಣ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಅವರ ಲೈಂಗಿಕ ಹಗರಣ ಕುರಿತು ತನಿಖೆ ನಡೆಸಬೇಕಾ ಅಥವಾ ಬೇಡವೇ ಎನ್ನುವುದನ್ನು ಜಾ.ದಳ- ಬಿಜೆಪಿ ನಾಯಕರು ಸಾರ್ವಜನಿಕವಾಗಿ ಹೇಳಲಿ ಎಂದು ಸವಾಲು ಹಾಕಿದ ಲಕ್ಷ್ಮಣ್‌, ವಿಡಿಯೋ ಮಾಡಿದ್ದು ಪ್ರಜ್ವಲ್‌, ವಿಡಿಯೋ ತೆಗೆದುಕೊಂಡಿದ್ದು ಕಾರ್ತಿಕ್, ಊರವರಿಗೆ ಹಂಚಿದ್ದು ದೇವರಾಜೇಗೌಡ. ಇದರಲ್ಲಿ ಸಿಎಂ ಹಾಗೂ ಡಿಸಿಎಂ ಅವರ ಪಾತ್ರ ಏನು ಇಲ್ಲ. ಆದರೂ ಸಿಎಂ ಹಾಗೂ ಡಿಸಿಎಂ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲೂ ಕೂಡ ಬಿಜೆಪಿ-ಜೆಡಿಎಸ್ ರಾಜಕೀಯವಾಗಿ ಬಳಸುವ ವ್ಯವಸ್ಥಿತ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.

ಒಕ್ಕಲಿಗ ನಾಯಕರಾಗಿ ಬೆಳೆಯುತ್ತಿರುವ ಡಿಕೆ ಶಿವಕುಮಾರ್‌ ಅವರನ್ನು ತುಳಿಯಲು ಸುಳ್ಳು ಸುದ್ದಿ ಹಬ್ಬಿಸಿ ಪ್ರಕರಣದ ದಾರಿ ತಪ್ಪಿಸಲಾಗುತ್ತಿದೆ. ಇದರಲ್ಲಿ ಡಿಕೆಶಿ ಪಾತ್ರವಿಲ್ಲ. ಈಗಾತಾನೇ ಎಸ್‌ಐಟಿ ತನಿಖೆ ಆರಂಭಿಸಿದೆ. ಆರಂಭದಲ್ಲೇ ಸರಿಯಿಲ್ಲ ಎಂದು ಹೇಳುವ ಮೂಲಕ ಮೈತ್ರಿ ನಾಯಕರು ಪ್ರಕರಣದ ದಿಕ್ಕು ತಪ್ಪುಸುತ್ತಿದ್ದಾರೆ ಎಂದು ದೂರಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಎಸ್‌ಐಟಿ ಮೇಲೆ ನಂಬಿಕೆ ಇಲ್ಲದಿದ್ದರೆ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ತಮ್ಮ ಮೈತ್ರಿ ಪಕ್ಷದವರನ್ನು ಒತ್ತಾಯಿಸಲಿ. ಪ್ರಜ್ವಲ್‌ ಕೆಲವೇ ನಿಮಿಷದಲ್ಲಿ ರಾಜತಾಂತ್ರಿಕ ಪಾಸ್‌ ಕೊಟ್ಟು ವಿದೇಶಕ್ಕೇ ಹೋಗಲು ದಾರಿಮಾಡಿಕೊಟ್ಟವರು ಯಾರು? ಈ ಪ್ರಕರಣದಲ್ಲಿ ನರೇಂದ್ರ ಮೋದಿ, ಅಮಿತ್ ಶಾ ಡಬಲ್ ಸ್ಟ್ಯಾಂಟ್ ತೆಗೆದುಕೊಳ್ಳುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾಗೆ ಪ್ರಜ್ವಲ್ ಹುಡುಕುವುದು ಕಷ್ಟವೇ ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಪ್ರಧಾನ ಕಾರ್ಯದರ್ಶಿಗಳಾದ ಎಂ. ಶಿವಣ್ಣ, ಭಾಸ್ಕರ್ ಎಲ್.ಗೌಡ, ರಘು, ಗಿರೀಶ್, ರಘು ಗೌಡ, ರಾಮಚಂದ್ರ,‌ ವಕ್ತಾರ ಕೆ. ಮಹೇಶ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

33 mins ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

3 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

4 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

6 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

7 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

11 hours ago